Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Ambedkar Jayanti: ಇಂದು ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ: ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

    By Author AINApril 14, 2025
    Share
    Facebook Twitter LinkedIn Pinterest Email
    Demo

    ಭಾರತದ ಸಂವಿಧಾನ ಶಿಲ್ಪಿ ಡಾ. ಭೀಮರಾವ್‌ ರಾಮ್‌ ಅಂಬೇಡ್ಕರ್‌ ಜಯಂತಿಯನ್ನು ಪ್ರತಿ ವರ್ಷ ಏಪ್ರಿಲ್‌ 14ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್‌ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.

    ಶಿಕ್ಷಣದಿಂದ ಮಾತ್ರ ಸಾಧ್ಯ ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಧೀಮಂತ ವ್ಯಕ್ತಿ. ಸಮಾನತೆಯ ಮಂತ್ರವನ್ನು ಸಾರಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ಚಿರಪರಿಚಿತರಾದವರು. ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ದೇಶಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು.

    ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!

    ಅಂಬೇಡ್ಕರ್‌ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆಯಲ್ಲಿ ರಾಮ್‌ಜಿ ಸಕ್ಪಾಲ್‌ ಹಾಗೂ ಭೀಮಬಾಯಿ ದಂಪತಿಗಳ 14ನೇ ಮಗನಾಗಿ 1891ರ ಏಪ್ರಿಲ್‌ 14ರಂದು ಜನಿಸಿದರು. ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದರು. ಓದುವುದರಲ್ಲಿ ಅಪಾರ ಆಸಕ್ತಿ, ಚುರುಕು ತನದಿಂದ ಅಧ್ಯಾಪಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅಂಬೇಡ್ಕರ್‌ ರವರ ಬುದ್ಧಿವಂತಿಕೆ ಮೆಚ್ಚಿಕೊಂಡು ಪ್ರೀತಿ, ವಾತ್ಸಲ್ಯದಿಂದ ನೋಡುತ್ತಿದ್ದ ಬ್ರಾಹ್ಮಣ ಅಧ್ಯಾಪಕರೊಬ್ಬರು ಅಂಬೇಡ್ಕರ್‌ ಎಂಬ ಮನೆತನದವರು.

    1953, ಜನವರಿ 12ರಂದು ಉಸ್ಮಾನಿಯಾ ವಿಶ್ವವಿದ್ಯಾನಿಲಯವು ಅವರಿಗೆ ಎಲ್‌ಎಲ್‌.ಡಿ ಗೌರವ ಪದವಿ ಕೊಟ್ಟು ಪುರಸ್ಕರಿಸಿತು. ಭಾರತದಲ್ಲಿ ಜಾತಿ ಪದ್ಧತಿ: ತಂತ್ರ, ಹುಟ್ಟು ಮತ್ತು ಬೆಳವಣಿಗೆ ಎಂಬ ಪ್ರಬಂಧ ಅವರ ಮೊಟ್ಟಮೊದಲ ಪ್ರಕಾಶಿತ ಕೃತಿ. ಭಾರತ ಸರ್ಕಾರ ಅವರಿಗೆ 1989ರಲ್ಲಿ ಭಾರತ ರತ್ನ ನೀಡಿ ಗೌರವಿಸಿತು.

    ತಮ್ಮ ಕಾರ್ಯ ಸಾಧನೆಯ ಹೋರಾಟದಲ್ಲಿ ಅವರು ತಮ್ಮ ಇಡೀ ಬದುಕನ್ನು ದೀನ ದಲಿತರ ಹಿತ ರಕ್ಷ ಣೆಗಾಗಿ ದುಡಿದರು. 1956 ಡಿಸೆಂಬರ್‌ 6 ರಂದು ಅವರು ಕೊನೆಯುಸಿರೆಳೆದರು. ಅಂಬೇಡ್ಕರ್‌ ಕೇವಲ ದಲಿತರಿಗೆ ಮಾತ್ರವಲ್ಲದೆ, ಅವರಲ್ಲಿನ ಸಾಮಾಜಿಕ ಕಳಕಳಿ, ಉದಾತ್ತ ನಿಲುವಿನಿಂದ ಭಾರತೀಯರೆಲ್ಲರ ಮನದಲ್ಲಿ ನೆಲೆಯಾಗಿದ್ದಾರೆ.

    ಅಂಬೇಡ್ಕರ್ ಜಯಂತಿಯ ಇತಿಹಾಸ

    ಡಾ. ಬಿ ಆರ್ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಜನಿಸಿದರು. ಸಮಾಜಕ್ಕೆ ನೀಡಿದ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ, ಭೀಮ ಜಯಂತಿ ಅಥವಾ ಸಮಾನತೆ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. 2015 ರಿಂದ ಈ ದಿನವನ್ನು ಭಾರತದಾದ್ಯಂತ ಸಾರ್ವಜನಿಕ ರಜಾದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

    ಅಂಬೇಡ್ಕರ್ ಜಯಂತಿಯ ಮಹತ್ವ

    ಸ್ವಾತಂತ್ರ ಬಂದು ಅದೆಷ್ಟೋ ವರ್ಷಗಳು ಉರುಳಿದರೂ ಇಂದಿಗೂ ಕೂಡ ಜಾತಿ ಆಧಾರಿತ ತಾರತಮ್ಯಗಳು ಅಂತ್ಯಗೊಂಡಿಲ್ಲ. ಆದರೆ ಅಂದು ಇದ್ದ ಜಾತಿ ತಾರತಮ್ಯವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಇದಕ್ಕೆ ಮೂಲ ಕಾರಣರೇ ಡಾ. ಬಿ ಆರ್ ಅಂಬೇಡ್ಕರ್. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಒದಗಿಸುವ ಸಂವಿಧಾನವನ್ನು ಅವರು

    ರಚಿಸಿಕೊಟ್ಟ ಧೀಮಂತ ವ್ಯಕ್ತಿಯನ್ನು ನೆನಪಿಸಿಕೊಳ್ಳಲೇ ಬೇಕು. ಹೀಗಾಗಿ ದೇಶದ ಜನರಿಗೆ ಇವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಕೆಲಸವನ್ನು ಜನ್ಮ ದಿನದಂದು ಮಾಡಲಾಗುತ್ತದೆ. ದೇಶದ ಹಲವೆಡೆ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವುದಲ್ಲದೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಕೊಲೆಸ್ಟ್ರಾಲ್‌, ಗ್ಯಾಸ್ಟ್ರಿಕ್ ಇರೋರಿಗೆ ಒಣ ಶುಂಠಿ ಸೇವನೆ ಬೆಸ್ಟ್ ಅಂತೆ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಹಳೇ ಬಟ್ಟೆ ದಾನ ಮಾಡ್ತಿದ್ದೀರಾ!? ಎಚ್ಚರ, ಈ ತಪ್ಪು ಮಾಡೋ ಮುನ್ನ ಸುದ್ದಿ ನೋಡಿ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.