ಹುಬ್ಬಳ್ಳಿ: ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು.
ಬಳಿಕ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಾವೇ ಮಂಜೂರು ಮಾಡಿರುವ ಮನೆ ನಿರ್ಮಾಣ ಮಾಡಲು 8 ವರ್ಷ ಬೇಕಾಯಿತು ಎಂದು ಕಿಡಿಕಾರಿದರು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಮುಂದಿನ ತಿಂಗಳು ರಾಜ್ಯ ವ್ಯಾಪ್ತಿಯಲ್ಲಿ ಒಟ್ಟು 42 ಸಾವಿರ ಮನೆಗಳನ್ನು ನೀಡುತ್ತಿದ್ದೇವೆ. ಹುಬ್ಬಳ್ಳಿ ಒಂದಕ್ಕೆ ಒಂದು ಸಾವಿರಕ್ಕೂ ಅಧಿಕ ಮನೆ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ತಿಂಗಳ ಅಂತ್ಯದಲ್ಲಿ ಹುಬ್ಬಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡುತ್ತೇವೆ ಎಂದರು.