ಧಾರವಾಡ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಶಾಸಕ ಯತ್ನಾಳ ಅವರ ಹೇಳಿಕೆಗೆ ಕೌಂಟರ್ ಕೊಟ್ಟಿರುವ ಸಚಿವ ಸಂತೋಷ ಲಾಡ್, ನನಗಿರುವ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರು ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ. ಅವರನ್ನೂ ಆ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ಯತ್ನಾಳ ಅವರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ಆದರೂ ಯತ್ನಾಳ ಅವರು ನಮ್ಮ ಸಿಎಂ ಬಗ್ಗೆ ಗೌರವ ಪೂರ್ವಕವಾಗಿ ಮಾತನಾಡಿದ್ದಾರೆ. ಅದು ನನಗೆ ಖುಷಿ ತಂದಿದೆ ಎಂದರು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಮೋದಿ ಅವರು ಮುಂದಿನ ವರ್ಷ ಪಿಎಂ ಆಗಿ ಇರುವುದಿಲ್ಲ. ಇದನ್ನು ಬಿಜೆಪಿಯವರು ಯಾರೂ ಹೇಳಿಕೊಳ್ಳುತ್ತಿಲ್ಲ. ಆದರೆ, ಅಲ್ಲಲ್ಲಿ ಸ್ವಲ್ಪ ಬಾಯಿ ಬಿಡುತ್ತಿದ್ದಾರೆ. ಮೊನ್ನೆಯಷ್ಟೇ ಪಿಯೂಷ್ ಗೋಯಲ್ ಮಾತನಾಡಿದ್ದಾರೆ. ಸ್ಕಿಲ್ ಇಂಡಿಯಾ ಸ್ಕಿಲ್ ಡೆವಲಪ್ ಆಗಿಲ್ಲ ಎಂದಿದ್ದಾರೆ. ಮೋದಿ ಅವರ ವಿರುದ್ಧ ನನಗೆ ವೈಯಕ್ತಿಕ ದ್ವೇಷ ಇಲ್ಲ. ಈ ದೇಶದಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಇರಬೇಕು. ಮೋದಿ ಅವರು 11 ವರ್ಷದಿಂದ ಪ್ರಧಾನಿಯಾಗಿದ್ದಾರೆ. ದೇಶದಲ್ಲಿ ಏನೂ ಬೆಳವಣಿಗೆ ಆಗಿಲ್ಲ. ಹೀಗಾಗಿ ನಿತಿನ್ ಗಡ್ಕರಿ ಪಿಎಂ ಆಗಲಿ ಅವರ ಪಕ್ಷದವರೇ ಅಪೇಕ್ಷಿಸುತ್ತಿದ್ದಾರೆ. ಅವರಿಗೂ ಒಂದು ಅವಕಾಶ ಸಿಗಬೇಕು ಎಂದರು.