ಹುಬ್ಬಳ್ಳಿ: ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ತತ್ವ ಸಿದ್ಧಾಂತಗಳು ಒಂದು ದೇಶಕ್ಕೆ ಸೀಮಿತವಾಗಿಲ್ಲ. ಅವು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ವ್ಯಾಪಾರಿ ಹಾಯ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಹಂಜಗಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್: ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ -ಸಂತೋಷ ಲಾಡ್!
ನಗರದ ಅಮರಗೋಳ ಎಪಿಎಂಸಿಯಲ್ಲಿಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ರವರು ನೀಡಿದ ಸಂವಿಧಾನದಲ್ಲಿ ಬಸವ ತತ್ವವಿದ್ದು
ಕೀರ್ತನಾಕಾರರ ವಿಚಾರಧಾರೆಗಳೂ ಅಡಕವಾಗಿವೆ. ಹಾಗೆಯೇ ಪ್ರತಿಯೊಬ್ಬರಿಗೂ ಕಾನೂನಿನಲ್ಲಿ ಸಮಾನ ಅವಕಾಶ ನೀಡಲಾಗಿದೆ. ಇದರಿಂದಾಗಿ ಮಹಿಳೆಯೊಬ್ಬರು ದೇಶದ ರಾಷ್ಟ್ರಪತಿಯಾಗಲು ಸಾಧ್ಯವಾಗಿದೆ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತ ಕಂಡ ಮಹಾ ಸಾಮಾಜಿಕ ಪರಿವರ್ತಕ ಹಾಗೂ ಆರ್ಥಿಕ ತಜ್ಞ. ಅವರು ರಚಿಸಿದ ಸಂವಿಧಾನದಿಂದಾಗಿ ರಾಜಕೀಯ, ಸಾಮಾಜಿಕ ಸ್ವಾತಂತ್ರ್ಯ ಕಾಣಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಚಿಕ್ಕಂದಿನಲ್ಲೇ ಶ್ರೇಣೀಕೃತ ಸಮಾಜದಲ್ಲಿ ಅನುಭವಿಸಿದ ಸಂಕಷ್ಟ, ಶೋಷಣೆ ಹಾಗೂ ಮೌಲ್ಯಗಳ ವ್ಯವಸ್ಥೆಯನ್ನು ಸಾಮಾಜಿಕವಾಗಿ ಬದಲಾಯಿಸುವ ಹಾಗೂ ಸಮಾಜದ ಕಟ್ಟಕಡೆಯ ಸಮುದಾಯವಾಗಿ ಜೀವಿಸುತ್ತಿದ್ದ ದಲಿತರಿಗೂ ಪರಿಪೂರ್ಣ ಜೀವನಾವಕಾಶ ಒದಗಿಸುವ ಇರಾದೆ ಅವರಲ್ಲಿತ್ತು. ಇದಕ್ಕಾಗಿ ಕಷ್ಟಪಟ್ಟು ಭಾರತಕ್ಕೆ ವಿಶಾಲ ಸಂವಿಧಾನ ನೀಡಿದರು ಎಂದು ಹೇಳಿದರು. ವ್ಯಾಪಾರಸ್ಥರಾದ ತಿರುಪಾಲ,ಮಧುಕರ್, ಸುರೇಶ ವಜ್ರವಣ್ಣವರ ಮುಂತಾದವರು ಇದ್ದರು.