ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇಯಾಗಿದೆ. ಮುಡಾ ಹಗರಣ ವಿಚಾರದಲ್ಲಿ ಸಿಎಂ ಹಾಗೂ ಸಿಎಂ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್ ಚೀಟ್ ಪ್ರಶ್ನಿಸಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರುದಾರ ಸ್ನೇಹಮಹಿ ಕೃಷ್ಣ ಅರ್ಜಿ ಹಾಕಿದ್ದರು.
ಇಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ಆದೇಶ ನೀಡಲಿದೆ. ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟ್ ಇಂದು ಎರಡು ತಕರಾರು ಅರ್ಜಿಗಳ ಆದೇಶ ಪ್ರಕಟಿಸಲಿದೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಒಂದು ವೇಳೆ ತಕರಾರು ಅರ್ಜಿಗಳನ್ನ ಕೋರ್ಟ್ ಪುರಸ್ಕರಿಸಿದರೇ ಸಿಎಂಗೆ ಮತ್ತೆ ಟೆನ್ಷನ್ ಶುರುವಾಗಲಿದೆ. ಆಗ ಸಿದ್ದರಾಮಯ್ಯಗೆ ಬಹುದೊಡ್ಡ ಕಾನೂನು ಕಂಟಕ ಎದುರಾಗೋದು ನಿಚ್ಚಳವಾಗಿದೆ. ಒಂದು ವೇಳೆ ಎರಡು ತಕರಾರು ಅರ್ಜಿಗಳು ತಿರಸ್ಕಾರಗೊಂಡಲ್ಲಿ ಸಿಎಂಗೆ ಬಿಗ್ ರಿಲೀಫ್ ಸಿಗಲಿದೆ. ಮುಡಾ ಸೈಟ್ ಹಗರಣದಿಂದ ಸಿಎಂ ಸಂಪೂರ್ಣ ನಿರಾಳಗೊಳ್ಳಲಿದ್ದಾರೆ.