ಚಿಕ್ಕೋಡಿ:- ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ದೇವದಾಸಿ ಪದ್ದತಿ ಜೀವಂತ? ಯುವತಿ ಮದುವೆ ಮಾಡಿಸಿ ಮುಕ್ತಿ ಕೊಟ್ಟ ಪೊಲೀಸರು!
ನಿಪ್ಪಾಣಿಯಲ್ಲಿ ಮಾತನಾಡಿದ ವಿಜಯೇಂದ್ರ, ಭಾರತಕ್ಕೆ ಸಂವಿಧಾನ ತಂದುಕೊಟ್ಟ ಪುಣ್ಯಾತ್ಮ ಅಂಬೇಡ್ಕರ್. ದುರಂತ ಅಂದ್ರೇ ಅರವತ್ತೈದು ವರ್ಷ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿತು. ಸಂವಿಧಾನ ನೀಡಿದ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರತ ರತ್ನ ನೀಡಬೇಕು ಅನ್ನೋದು ಮನಸ್ಸಿನಲ್ಲಿ ಬರಲಿಲ್ಲ.
ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ ಮೇಲೆ ಭಾರತ ರತ್ನ ನೀಡಿದ್ರೂ. ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನ ಕಾಂಗ್ರೆಸ್ ಸೋಲಿಸಿದ್ರೂ. ಅವರನ್ನ ಸೋಲಿಸಿದವರಿಗೆ ಕಾಂಗ್ರೆಸ್ ಪದ್ಮಭೂಷಣ ನೀಡಿ ಸನ್ಮಾನಿಸಿತು. ಕಾಂಗ್ರೆಸ್ ನವರಿಗೆ ಅಂಬೇಡ್ಕರ್ ಅವರ ಬಗ್ಗೆ ಒಳ್ಳೆಯ ವಿಚಾರ ಇಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಸೋತ ಮೇಲೆ ಅಂಬೇಡ್ಕರ್ ಅವರನ್ನ ಪದೇ ಪದೇ ನೆನಪಿಸಿಕೊಳ್ಳುತ್ತಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ, ರಾಹುಲ್ ಗಾಂಧಿ ಅವರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ.
ಹಿಂದಿಯಲ್ಲಿ ಬಿ.ವೈ ವಿಜಯೇಂದ್ರ ಭಾಷಣ ಮಾಡಿದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕರ್ನಾಟಕದಲ್ಲಿ ರಾಜ್ಯದಲ್ಲಿ ಇರೋದು ಜನ ವಿರೋಧಿ ಸರ್ಕಾರ. ಇದು ಬೆಲೆ ಏರಿಕೆ ಸರ್ಕಾರ, ಐವತ್ತು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದೆ. ಎಸ್ಸಿ, ಎಸ್ಟಿ ಹಣವನ್ನ ದುರುಪಯೋಗ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಇಂತಹ ಸರ್ಕಾರವನ್ನ ರಾಜ್ಯದಿಂದ ಬುಡ ಸಮೇತ ಕಿತ್ತು ಒಗೆಯಬೇಕು. ಮುಂದೆ ಬರುವ ದಿನಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಸ್ವಂತ ಶಕ್ತಿ ಮೇಲೆ. ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ. ಜನ ವಿರೋಧಿ ಸರ್ಕಾರವನ್ನ ಕಿತ್ತು ಒಗೆಯೋಣ ಎಂದು ಕರೆ ಕೊಟ್ಟಿದ್ದಾರೆ.