ಬೆಂಗಳೂರು: ಕಳೆದ ಒಂದು ತಿಂಗಳ ಹಿಂದೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಖಾಸಗಿ ಕಾರ್ಯಕ್ರಮ ಮುಗಿದ ಬಳಿಕ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ವಿಡಿಯೋ ವೈರಲ್ ಆದ ಬಳಿಕ ಬಸವೇಶ್ವರ ನಗರ ಪೊಲೀಸರು, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಿಸಿಕೊಂಡು ಇಬ್ಬರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ವಿನಯ್ಗಾಗಿ ಹುಡುಕಾಟ ನಡೆದಿದೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ರೀಲ್ಸ್ಗೆ ಬಳಕೆ ಮಾಡಿದ್ದ ಶಸ್ತ್ರಾಸ್ತ್ರವನ್ನು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಈ ವೇಳೆ ರಬ್ಬರ್ ಮಚ್ಚು ನೀಡಲಾಯಿತು. ಇದು ಕಣ್ತಪ್ಪಿನಿಂದ ಆಗಿದ್ದು, ನಿಜವಾದ ಮಚ್ಚನ್ನು ನೀಡುತ್ತೇವೆ ಎಂದಿದ್ದರು. ಆ ಬಳಿಕ ರೀಲ್ಸ್ಗೆ ಬಳಕೆ ಆದ ಮಚ್ಚನ್ನು ಎಸೆದಿದ್ದಾಗಿ ರಜತ್ ಒಪ್ಪಿಕೊಂಡಿದ್ದಾರೆ.
ಕೇಸ್ನಲ್ಲಿ ಇದುವರೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರವನ್ನು ಪೊಲೀಸರ ಎದುರು ಹಾಜರು ಪಡಿಸಿಲ್ಲ. ಹೀಗಾಗಿ ಸಾಕ್ಷಿನಾಶ ಎಂದು ಸಹ ಪೋಲಿಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಅತ್ತ ಕೋರ್ಟ್ನಲ್ಲಿ ರಜತ್ಗೆ ಜಾಮೀನು ನೀಡಲಾಗಿದೆ. ಈ ವೇಳೆ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿತ್ತು. ಇದರಲ್ಲಿ ಅವರು ವಿಚಾರಣೆಗೆ ಹಾಜರಿ ಹಾಕಲೇಬೇಕು ಎಂಬುದು ಕೂಡ ಆಗಿತ್ತು.
ಆದರೆ, ರಜತ್ ಅವರು ಕೋರ್ಟ್ ವಿಚಾರಣೆಗೆ ಹಾಜರಿ ಹಾಕಿಲ್ಲ. ಹೀಗಾಗಿ, ರಜತ್ ವಿರುದ್ಧ ನಾನ್ ಬೇಲೆಬೆಲ್ ವಾರಂಟ್ ಹೊರಡಿಸಿತ್ತು. ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಸೂಚಿಸಿತ್ತು. ಕೋರ್ಟ್ ಆದೇಶದಮೇರೆಗೆ ಪೊಲೀಸರು ಮತ್ತೊಮ್ಮೆ ರಜತ್ನ ಬಂಧಿಸಿದ್ದಾರೆ. ಅವರನ್ನು 24ನೇ ಎಸಿಜೆಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.