Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳಿಂದ ಗೊಂದಲ ಸೃಷ್ಟಿ, ಅದಕ್ಕೆಲ್ಲಾ ತಕ್ಕ ಉತ್ತರ ನೀಡುತ್ತೇವೆ: ಡಿ.ಕೆ. ಶಿವಕುಮಾರ್

    By Author AINApril 16, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:  “ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

    “ಕರ್ನಾಟಕ ರಾಜ್ಯದ 11ನೇ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಈ ವರದಿ ಬಗ್ಗೆ ಚರ್ಚೆ ನಡೆಸಲು ಇದೇ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ” ಎಂದು ತಿಳಿಸಿದರು.

    ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!

    “ಈ ಮಧ್ಯೆ ಮಾಧ್ಯಮಗಳಲ್ಲಿ ವಿವಿಧ ವರದಿಗಳು ಪ್ರಕಟವಾಗುತ್ತಿದ್ದು, ಬೇರೆ ನಾಯಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಒದಗಿಸಿಕೊಡಬೇಕಾಗಿರುವುದು ನಮ್ಮ ಕರ್ತವ್ಯ. ಈ ವರದಿಯ ಸಾರಾಂಶವನ್ನು ನಮ್ಮ ಶಾಸಕರಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದೇನೆ. ನಮ್ಮ ನಾಯಕರು ಅವರದೇ ಆದ ಅಭಿಪ್ರಾಯ ತಿಳಿಸಿದ್ದಾರೆ” ಎಂದರು.

    “ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ನಮ್ಮ ಸರ್ಕಾರವೇ ತೀರ್ಮಾನ ಮಾಡಿ, ಇದಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಈ ಸಮಿತಿ ಎಲ್ಲಾ ಕಡೆ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಿದೆ. ಶಾಸಕರು ಹೆಚ್ಚಿನ ಮಾಹಿತಿ ಬೇಕು ಎಂದು ಕೇಳಿರುವ ಹಿನ್ನೆಲೆಯಲ್ಲಿ ಅವರಿಗೂ ವರದಿ ಪ್ರತಿ ನೀಡಲಾಗಿದೆ. ಈ ಸಮಿತಿಯು ವಿಸ್ತೃತವಾಗಿ ಅಧ್ಯಯನ ಮಾಡಿದ್ದು, ಅವರ ವರದಿ ಬಗ್ಗೆ ಲೋಪದೋಷ ಹುಡುಕಲು ನಾವು ಮುಂದಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

    ಆಫ್ ದ ರೆಕಾರ್ಡ್ ಹೇಳಿಕೆಗಳಿಗೆ ತೆರೆ ಎಳೆಯುತ್ತೇವೆ

    “ಕೆಲವು ಮಾಧ್ಯಮಗಳಲ್ಲಿ ವಾಸ್ತವಾಂಶ ಹೊರತಾಗಿ ಅನೇಕ ವರದಿ ಮಾಡಲಾಗಿದೆ. ಮುಸಲ್ಮಾನರೆ ಹೆಚ್ಚಾಗಿದ್ದಾರೆ ಎಂಬ ಅರ್ಥ ಬರುವ ರೀತಿ ವರದಿ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ನಾವು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ. ಈ ಸಭೆಯಲ್ಲಿ ಚರ್ಚೆ ಮಾಡಿರುವ ಅಂಶವನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇವೆ. ಈ ವಿಚಾರವನ್ನು ಸಧ್ಯಕ್ಕೆ ಮಾಧ್ಯಮಗಳ ಮುಂದೆ ಪ್ರಸ್ತಾಪ ಮಾಡುವುದಿಲ್ಲ. ಅನೇಕರು ಆಫ್ ದ ರೆಕಾರ್ಡ್ ಎಂದು ಏನೇನೋ ಹೇಳಿರಬಹುದು. ಅದಕ್ಕೆಲ್ಲ ನಾವು ತೆರೆ ಎಳೆಯುತ್ತೇವೆ” ಎಂದು ಹೇಳಿದರು.

    ಎಲ್ಲರ ರಕ್ಷಣೆ ನಮ್ಮ ಕರ್ತವ್ಯ

    ಬಹಿರಂಗವಾಗಿರುವ ಅಂಕಿ ಅಂಶಗಳ ಬಗ್ಗೆ ಶಾಸಕರ ಅಭಿಪ್ರಾಯ ಏನು ಎಂದು ಕೇಳಿದಾಗ, “ನಾವು ಒಂದು ಸಮಾಜದ ಬಗ್ಗೆ ಮಾತ್ರ ಚಿಂತೆ ಮಾಡುತ್ತಿಲ್ಲ. ಎಲ್ಲಾ ವರ್ಗದವರ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಇನ್ನು ಕೆಲವರು ಸಚಿವರಾಗಿದ್ದು, ಎಲ್ಲಾ ಸಮಾಜಕ್ಕೆ ರಕ್ಷಣೆ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ಆನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ” ಎಂದರು.

    ಮಾಹಿತಿ ಕೊರತೆಯಿಂದ ಈ ಹಿಂದೆ ವಿರೋಧ

    ಈ ಹಿಂದೆ ಅನೇಕ ಸಚಿವರು ಜಾತಿಗಣತಿ ಬಗ್ಗೆ ಅಪಸ್ವರ ವ್ಯಕ್ತಪಡಿಸುತ್ತಿದ್ದ ಬಗ್ಗೆ ಕೇಳಿದಾಗ, “ಆಗ ಯಾರ ಬಳಿಯೂ ಮಾಹಿತಿ ಇರಲಿಲ್ಲ. ಮಾಹಿತಿ ಬಹಿರಂಗವಾಗಿರುವುದೇ ಮೂರು ದಿನಗಳ ಹಿಂದೆ. ಮೊನ್ನೆ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾದ ಬಳಿಕವಷ್ಟೇ ನಮಗೆ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ನಮಗೆ ಸಿಕ್ಕ ಮಾಹಿತಿಯನ್ನು ನಮ್ಮ ಸಹೋದ್ಯೋಗಿ ಶಾಸಕರ ಜತೆ ಹಂಚಿಕೊಳ್ಳುವುದು ನಮ್ಮ ಕರ್ತವ್ಯ. ಹೀಗಾಗಿ ಸಭೆ ಮಾಡಿದ್ದೇವೆ. ಅವರಿಗೂ ವರದಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅವರು ತಮ್ಮ ಸಲಹೆ ನೀಡಬಹುದು” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025

    19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

    June 21, 2025

    ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್

    June 21, 2025

    ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ!

    June 21, 2025

    ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪರಿಷತ್ ಶಾಸಕ ಟಿ. ಎ.ಶರವಣ ಭಾಗಿ

    June 21, 2025

    BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ವಿಜಯೇಂದ್ರ ಹೇಳಿದ್ಯಾಕೆ..?

    June 21, 2025

    BSY ಮೇಲೆ ಈಶ್ವರಪ್ಪಗೆ ಸಾಪ್ಟ್ ಕಾರ್ನರ್, BJPಗೆ ವಾಪಸ್ ಆಗ್ತಾರಾ ಮಾಜಿ ಸಚಿವ..!?

    June 21, 2025

    ನಾನು ದ್ವೇಷ ಭಾಷಣ ಮಾಡಿದ್ರು ಸಹ ನನಗೂ ನೋಟೀಸ್ ಜಾರಿ ಆಗುತ್ತದೆ: ಸಚಿವ ದಿನೇಶ್ ಗುಂಡೂರಾವ್

    June 21, 2025

    ವಸತಿ ಯೋಜನೆ ಅವ್ಯವಹಾರದ ಬಗ್ಗೆ ಮಾತಾಡಿದ್ದು ಸತ್ಯ, ಸಿಎಂ ಕರೆದರೆ ಹೋಗಿ ಹೇಳುತ್ತೇನೆ: ಬಿಆರ್ ಪಾಟೀಲ್

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.