ಬೀದರ್ : ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಸಿಬ್ಬಂದಿಗಳು ಅವಕಾಶ ನೀಡದ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಗಳ ಬಗ್ಗೆ ತನಿಖೆ ಮಾಡಿ ಕೂಡಲೇ ವರದಿ ನೀಡಲು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಿಸಿದ ಪರೀಕ್ಷ ಕೇಂದ್ರ ಸಿಬ್ಬಂದಿ
ಸಿಬ್ಬಂದಿಗಳು ಮಾಡಿದ ಎಡವಟ್ಟಿನಿಂದ ಇಂದು ವಿದ್ಯಾರ್ಥಿಯ ಭವಿಷ್ಯ ನಾಶವಾಗಿದೆ ಎಂದು ಮಾದ್ಯಮಗಳಲ್ಲಿ ಸುದ್ದಿಯಾಗಿದೆ. ಹೀಗಾಗಿ ಉಪ ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ, ನಿಯಮಾನುಸಾರ ತಪ್ಪ ಮಾಡಿದವರ ಮೇಲೆ ಶಿಸ್ತು ಕ್ರಮವಹಿಸಬೇಕು. ಹಾಗೂ 24 ಗಂಟೆಯ ಒಳಗಾಗಿ ವರದಿಯನ್ನು ಸಲ್ಲಿಸಬೇಕು ಎಂದು ಪತ್ರದ ಮೂಲಕ ಬೀದರ್ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆಯಿಂದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೂಚನೆ ನೀಡಿದ್ದಾರೆ.