Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಬೆಂಗಳೂರಲ್ಲಿ ಹ್ಯಾಟ್ರಿಕ್ ಸೋಲು: ಕುಂಟುನೆಪ ಹೇಳಿದ RCB ಕ್ಯಾಪ್ಟನ್!

    By AIN AuthorApril 19, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಪಡೆ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಂತಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡ ಈ ಬಾರಿ ಯಾವುದೇ ಪಂದ್ಯ ಗೆದಿಲ್ಲ.

    ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಸೆಕ್ಯೂರಿಟಿಯಿಂದಲೇ ನಡೆಯಿತಾ ಮಿಸ್ ಫೈರಿಂಗ್!?

    ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

    ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಅಜೇಯ 50 ರನ್ ಬಾರಿಸುವ ಮೂಲಕ ಆರ್​ಸಿಬಿ ತಂಡದ ಸ್ಕೋರ್​ ಅನ್ನು 95 ಕ್ಕೆ ತಂದು ನಿಲ್ಲಿಸಿದರು. ಈ ಸುಲಭ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

    ಸೋಲಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ನಮ್ಮ ಪರಾಜಯಕ್ಕೆ ಪಿಚ್ ಕಾರಣ ಎಂದಿದ್ದಾರೆ. ಏಕೆಂದರೆ ಈ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಹೀಗಾಗಿ ನಮ್ಮ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದಾರೆ.

    ಇಂತಹ ಪಿಚ್​ನಲ್ಲಿ ಜೊತೆಯಾಟವಾಡುವುದು ಮುಖ್ಯವಾಗಿತ್ತು. ಆದರೆ ನಮ್ಮಿಂದ ಅದು ಸಾಧ್ಯವಾಗಲಿಲ್ಲ. ನಾವು ಬೇಗನೆ ವಿಕೆಟ್​ಗಳನ್ನು ಕಳೆದುಕೊಂಡ ಪರಿಣಾಮ, ಉತ್ತಮ ಜೊತೆಯಾಟ ಮೂಡಿಬಂದಿರಲಿಲ್ಲ. ಇದು ಮುಂಬರುವ ಪಂದ್ಯಗಳೀಗೆ ನಮಗೆ ಪಾಠ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

    ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅವರನ್ನು ಕಣಕ್ಕಿಳಿಸದಿರುವ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ತಂಡದಲ್ಲಿ ಪಡಿಕ್ಕಲ್ ಬದಲಿಗೆ ಬೇರೆಯವನರನ್ನು ಕಣಕ್ಕಿಳಿಸಿದ್ದೆವು. ಆದರೆ ಅದು ಪರಿಣಾಮಕಾರಿಯಾಗಲಿಲ್ಲ ಎಂದರು.

    ಇದಾಗ್ಯೂ ಪಂಜಾಬ್ ಕಿಂಗ್ಸ್ ವಿರುದ್ಧ ನಮ್ಮ ಬೌಲರ್​ಗಳನ್ನು ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ನಮ್ಮ ಬೌಲಿಂಗ್ ವಿಭಾಗವು ತುಂಬಾ ಚೆನ್ನಾಗಿ ಆಡಿದ್ದರು. ಇದುವೇ ಈ ಪಂದ್ಯದ ನಮ್ಮ ಪ್ಲಸ್ ಪಾಯಿಂಟ್. ಬೌಲಿಂಗ್​ಗೆ ಪಿಚ್ ಕೂಡ ಸಹಕಾರಿಯಾಗಿತ್ತು. ಇದು ಆರಂಭದಲ್ಲಿ ಬೌಲರ್‌ಗಳಿಗೆ ಸಹಾಯ ಮಾಡಿದೆ.

    ಆದರೆ ನಮ್ಮ ಬೌಲರ್​ಗಳ ವಿರುದ್ಧ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಗೆಲುವಿನ ಕೀರ್ತಿ ಅವರಿಗೆ ಸಲ್ಲುತ್ತದೆ. ವಿಕೆಟ್ ಏನೇ ಇರಲಿ, ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿ ಗೆಲುವಿನ ಸ್ಕೋರ್ ಗಳಿಸಬೇಕಿತ್ತು. ಮುಂದಿನ ಪಂದ್ಯಕ್ಕೂ ಮುನ್ನ ಬ್ಯಾಟಿಂಗ್ ವಿಭಾಗದಲ್ಲಿನ ಕೆಲವು ತಪ್ಪುಗಳನ್ನು ನಾವು ಸರಿಪಡಿಸಬೇಕಿದೆ ಎಂದು ರಜತ್ ಪಾಟಿದಾರ್ ಇದೇ ವೇಳೆ ಅಭಿಪ್ರಾಯಪಟ್ಟರು.

    Demo
    Share. Facebook Twitter LinkedIn Email WhatsApp

    Related Posts

    ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್?

    June 25, 2025

    ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

    June 25, 2025

    ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು: ಡಿಸಿಎಂ ಡಿಕೆ ಶಿವಕುಮಾರ್

    June 25, 2025

    ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ: ಸಚಿವರ ಪರ ಶಾಸಕ ರವಿ ಗಣಿಗ ಬ್ಯಾಟಿಂಗ್

    June 25, 2025

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.