ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮಧ್ಯರಾತ್ರಿ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ನಡೆದಿದ್ದು, ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದರು.
ಇನ್ನೂ ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು. ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್ ದಾಖಲಾಗಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್: ರಿಕ್ಕಿ ರೈ ಸ್ಥಿತಿ ಗಂಭೀರ!
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.