ಚಿತ್ರದುರ್ಗ : ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆಸಿ ಹಾಕಿದ ಘಟನೆ ಖಂಡಿಸಿ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಶನಿವಾರ ಬೆಳಗ್ಗೆ 11.30 ಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ವಿಚಾರ ; ಸಿಇಟಿ ಪರೀಕ್ಷಾಧಿಕಾರಿ ವಿರುದ್ಧ ದೂರು
ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆದು ಪರೀಕ್ಷೆ ನಡೆಸಿರುವುದು ಸರಿಯಲ್ಲ. ಇದನ್ನು ಚಿತ್ರದುರ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡಿಸಿದ್ದು ಬೀದರ್ ನಲ್ಲಿ ಒಬ್ಬ ವಿದ್ಯಾರ್ಥಿಗೆ ಜನಿವಾರ ಹಾಕಿರೋ ಪ್ರಯುಕ್ತ ಪರೀಕ್ಷೆಗೆ ಅವಕಾಶವನ್ನು ನೀಡದೆ ಇರುವುದು ಆ ವಿದ್ಯಾರ್ಥಿಯ ಜೀವನಕ್ಕೆ ತೊಂದರೆಯಾಗಿರುತ್ತದೆ. ಇದನ್ನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಚಿತ್ರದುರ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಗಂಭೀರವಾಗಿ ಪರಿಗಣಿಸಿದ್ದು ಈ ಕೃತ್ಯವು ಬ್ರಾಹ್ಮಣ ಸಮುದಾಯದ ಮೇಲೆ ಪ್ರಹಾರ ಹಾಗು ನಮ್ಮ ಧರ್ಮಾಚರಣೆ ಮೇಲೆ ನಿರ್ಬಂಧ ಹೇರಿದಂತೆ ಇದನ್ನು ನಾವು ಸರ್ವತ್ರ ಸಹಿಸುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.