ಧಾರವಾಡ : ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದರು.
ಈ ವಿಷಯದಲ್ಲಿ ನಾವು ರಾಜಕೀಯ ಮಾತನಾಡುವುದಿಲ್ಲ. ಈಗ ರಾಜಕೀಯ ಮಾತನಾಡುವುದು ಸರಿಯಲ್ಲ. ಇನ್ನೂ ಕೂಡ ಏನು ಆಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಶಿವಮೊಗ್ಗದವರ ಮಾಹಿತಿ ಬಿಟ್ರೇ ಬೇರೆ ಮಾಹಿತಿ ಬಂದಿಲ್ಲ. ಪುಲ್ವಾಮ್ ಬಳಿಕ ಜನ ಎಲ್ಲ ಮರೆತು ಬಿಟ್ಟಿದ್ರು. ಈಗ ಅದನ್ನು ಮಾತನಾಡಿದರೆ ರಾಜಕೀಯ ಆಗುತ್ತದೆ
ಧರ್ಮ ಕೇಳಿ ಗುಂಡು ಹೊಡೆದ್ರು, ಬೇಲ್ ಪುರಿ ತಂತಿದ್ದವರ ಮೇಲೂ ಫೈರಿಂಗ್ ; ಜಮ್ಮುಕಾಶ್ಮೀರದಲ್ಲಿ ಉಗ್ರರ ಕುಕೃತ್ಯ
ಜಮ್ಮು-ಕಾಶ್ಮೀರದಲ್ಲಿ 2000ಕ್ಕಿಂತ ಹೆಚ್ಚು ಇಂತಹ ಘಟನೆಗಳು ಆಗಿವೆ. ಕಳೆದ ಹತ್ತು ವರ್ಷಗಳಲ್ಲಿ 800ಕ್ಕೂ ಹೆಚ್ಚು ಸಣ್ಣ ಸಣ್ಣ ಬಾಂಬ್ ಸ್ಫೋಟವಾಗಿವೆ. ಇದರ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗಿಲ್ಲ. ಇವತ್ತು ಈ ವಿಷಯದಲ್ಲಿ ರಾಜಕೀಯ ಟೀಕೆ ಸರಿಯಲ್ಲ. ಪುಲ್ವಾಮ್ ದಾಳಿ ಆಗಿತ್ತು, ಅದರಲ್ಲಿ ಎಷ್ಟು ಜನರನ್ನು ಹಿಡಿದಿದ್ದಾರೆ. 300ಕೆಜಿ RDX ಬಂದಿತ್ತು. ಅದು ಎಲ್ಲಿಂದ ಬಂತು ಎಂಬ ಮಾಹಿತಿ ಸಿಕ್ಕಿಲ್ಲ. ಅಲ್ಲಿನ ರಾಜ್ಯಪಾಲರು ಸಂಪೂರ್ಣ ಮಾಹಿತಿ ಕೊಟ್ಟಿದ್ದರು. ಆದರೂ ಆ ಬಗ್ಗೆ ಚರ್ಚೆ ಆಗಿಲ್ಲ ಎಂದರು.