Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿದ ಪ್ರಧಾನಿ ಮೋದಿ, ರಕ್ಷಣಾ ಸಚಿವರು

    By AIN AuthorApril 22, 2025
    Share
    Facebook Twitter LinkedIn Pinterest Email
    Demo

    ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

     

    ಪ್ರಧಾನಿ ಮೋದಿ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ. ಜೊತೆಗೆ ದಾಳಿಯಾಗಿರುವ ಸ್ಥಳಕ್ಕೆ ಭೇಟಿನ ನೀಡಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

    ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ಬಗ್ಗೆ ರಾಜಕೀಯ ಮಾಡಲ್ಲ ; ಸಚಿವ ಸಂತೋಷ್ ಲಾಡ್

    ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಲವು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದಿದ್ದಾರೆ.

     

    ಇನ್ನೂ ಭಯೋತ್ಪಾದಕ ದಾಳಿ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ತಮ್ಮ ದೆಹಲಿಯ ಮನೆಯಲ್ಲಿ ವಿಶೇಷ ಸಭೆ ನಡೆಸಿದ್ದಾರೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಅರೆಸೈನಿಕ ಭದ್ರತಾ ಸಂಸ್ಥೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದು, ಭಯೋತ್ಪಾದಕ  ದಾಳಿಯನ್ನು ಖಂಡಿಸಿದ್ದಾರೆ. ಮುಗ್ಧ ನಾಗರಿಕರ ಮೇಲಿನ ಈ ಹೇಡಿತನದ ದಾಳಿ ಹೇಡಿತನದ ಕೃತ್ಯ ಮತ್ತು ಅತ್ಯಂತ ಖಂಡನೀಯ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾರ್ದಿಕ್- ಗಿಲ್ ನಡುವಿನ ಸ್ನೇಹದಲ್ಲಿ ಬಿರುಕು!? GT ಕ್ಯಾಪ್ಟನ್ ಹೇಳಿದ್ದೇನು?

    May 31, 2025

    ಯಾವುದೇ ಕಾರಣಕ್ಕೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 31, 2025

    ಮುಂಬೈ-ಪಂಜಾಬ್ ಪಂದ್ಯದ ಮೇಲೆ ಮಳೆ ಭೀತಿ: ಕ್ವಾಲಿಫೈಯರ್ 2 ರದ್ದಾದ್ರೆ ಬೆಂಗಳೂರು ಎದುರಿಸುವ ತಂಡ ಇದೇ..!

    May 31, 2025

    ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ: ಪ್ರಧಾನಿ ಮೋದಿ

    May 31, 2025

    WhatsApp: ವಾಟ್ಸಾಪ್’ನಿಂದ ಹೊಸ ಫೀಚರ್ ಬಿಡುಗಡೆ! ಹೇಗಿದೆ ಈ ಅಪ್ಡೇಟ್?

    May 31, 2025

    IPL 2025: ಐತಿಹಾಸಿಕ ದಾಖಲೆ ಬರೆದ “ಹಿಟ್ ಮ್ಯಾನ್”: ಈ ಸಾಧನೆ ಮಾಡಿದ ಮೊದಲ ಭಾರತೀಯ!

    May 31, 2025

    ದೇಶದಲ್ಲಿ ಕೊರೋನಾ ವೈರಸ್ ಹರಡುವಿಕೆ ಹೆಚ್ಚಳ: 2 ಸಾವಿರ ದಾಟಿದ ಪಾಸಿಟಿವ್ ಪ್ರಕರಣಗಳು

    May 31, 2025

    IPL ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್’ಗಳು: ಕೆಟ್ಟ ದಾಖಲೆ ಮಾಡಿದ ಸ್ಟಾರ್ ಆಲ್ ರೌಂಡರ್

    May 31, 2025

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    May 31, 2025

    Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ!

    May 30, 2025

    ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.