Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಉಗ್ರರ ಭೀಕರ ದಾಳಿ: ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರಿಂದ ಕೃತ್ಯ – ಟಿಎ ಶರವಣ ವಾಗ್ದಾಳಿ!

    By AIN AuthorApril 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರಿಂದ ಪಹಲ್ಗಾಮ್ ನಲ್ಲಿ ಮಂಗಳವಾರ ಭೀಕರ ದಾಳಿ ನಡೆದಿದೆ ಎಂದು ಪರಿಷತ್ ಶಾಸಕ TA ಶರವಣ ಆಕ್ರೋಶ ಹೊರ ಹಾಕಿದ್ದಾರೆ.

    ಉಗ್ರರ ಭೀಕರ ದಾಳಿ: ಕನ್ನಡಿಗರ ಮೃತದೇಹಗಳು ಬೆಂಗಳೂರಿಗೆ ಶಿಫ್ಟ್, ತವರಿನಲ್ಲಿ ಅಂತಿಮ ನಮನ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ದಾಳಿ ಭಾರತದ ಸಾರ್ವಭೌಮತೆಗೆ ಮತ್ತು ಸಮಗ್ರತೆಗೆ ಉಂಟಾದ ಧಕ್ಕೆ. ಹೀಗಾಗಿ ಇದನ್ನು ಬಲವಾಗಿ ಖಂಡಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ನೇತೃತ್ವದ ಕೇಂದ್ರದ ಎನ್.ಡಿ. ಎ ಸರ್ಕಾರ, ಅಧಿಕಾರಕ್ಕೆ ಬಂದು ಕಾಶ್ಮೀರದಲ್ಲಿ ರಾಜಕೀಯ ಪರಿವರ್ತನೆ ಆದ ಬಳಿಕ ಶಾಂತಿಯ ಹೊಸ ಕಳೆಯೇ ಅಲ್ಲಿ ಬಂದಿತ್ತು. ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರು ಈ ಭೀಕರ ದಾಳಿ ನಡೆಸಿದ್ದು, ಇದರ ಹಿಂದಿನ ಸಂಚುಕೋರರನ್ನು ಸದೆಬಡಿಯಬೇಕೆಂದು ಶರವಣ ಅವರು ಒತ್ತಾಯಿಸಿದ್ದಾರೆ.

    ಇದರಲ್ಲಿ ಕರ್ನಾಟಕದ ಮೂವರು ಬಲಿಯಾಗಿದ್ದು, ಅತ್ಯಂತ ನೋವಿನ ಸಂಗತಿ ಆಗಿದೆ. ಈ ಕುಟುಂಬಗಳಿಗೆ ಇಂಥ ದಾರುಣ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಶರವಣ ಕಂಬನಿ ಮಿಡಿದಿದ್ದಾರೆ. ಕೇಂದ್ರ ಸರಕಾರ ಈ ಉಗ್ರರ ಕೃತ್ಯವನ್ನು ಹತ್ತಿಕ್ಕುವಲ್ಲಿ ಹಲವು ಕ್ರಮಗಳನ್ನು ಮುಲಾಜಿಲ್ಲದೆ ತೆಗೆದುಕೊಂಡಿದೆ. ಧರ್ಮದ ಹೆಸರಲ್ಲಿ ಇಂಥ ಹಿಂಸೆ ಮತ್ತು ರಕ್ತ ಪಿಪಾಸುತನವನ್ನು ಯಾರೂ ಮಾಡಬಾರದು. ಈ ನೀಚ ಕೆಲಸ ಮಾಡಿರುವ ಉಗ್ರರ ಗುಂಪಿಗೆ ತಕ್ಕ ಎದುರೇಟು ಕೇಂದ್ರ ಕೊಟ್ಟೆ ಕೊಡುತ್ತದೆ ಎಂದು ಶರವಣ ಭರವಸೆ ವ್ಯಕ್ತಪಡಿಸಿದ್ದಾರೆ.

    ಇನ್ನೂ ಕಾಶ್ಮೀರಕ್ಕೆ ತೆರಳಿ ಅಲ್ಲಿ ಸಿಲುಕಿದ್ದ ಪ್ರವಾಸಿ ಕನ್ನಡಿಗರಿಗೆ ನೆರವು ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.