ಚಾಮರಾಜನಗರ:- ಕೆಪಿಸಿಸಿ ಅಧ್ಯಕ ಹಾಗೂ ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಅವರು ಇಂದು ಚಾಮರಾಜನಗರದ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದರು.
RCB Vs RR: ಕಬ್ಬಿಣದ ಕಡಲೆಯಾದ ‘ಚಿನ್ನಸ್ವಾಮಿ’: ಆರ್ ಸಿಬಿಗೆ ಇಂದು ತವರಲ್ಲಿ ಸಿಗುತ್ತಾ ಗೆಲುವು!?
ಭೇಟಿ ವೇಳೆ ಮಹದೇಶ್ವರ ದೇಗುಲದಲ್ಲಿ ಇಂದು ಮುಂಜಾನೆಯೇ ಪೂಜೆ ಸಲ್ಲಿಸಿದರು. ಬಳಿಕ ಮಹದೇಶ್ವರ ಬೆಟ್ಟದಲ್ಲಿ ಹುಲಿವಾಹನ ಮಹದೇಶ್ವರ ಬೆಳ್ಳಿರಥ ಪ್ರದಕ್ಷಿಣೆಯಲ್ಲಿ ದಂಡುಕೋಲು ಸೇವೆ ಸಲ್ಲಿಸಿದರು.
ಇದೆ ವೇಳೆ ಮಹದೇಶ್ವರ ಬಳಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇನ್ನೂ ಬೆಂಗಳೂರು ಗಡಿ ಜಿಲ್ಲೆ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ತಲುಪಿದ್ದು, ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಬಹಳಷ್ಟು ಸಚಿವರು ಬುಧವಾರ ರಾತ್ರಿಯೇ ಮಹದೇಶ್ವರ ಬೆಟ್ಟ ತಲುಪಿದ್ದು, ಮೈಸೂರಿನಲ್ಲಿ ವಾಸ್ತವ್ಯ ಮಾಡಿರುವ ಕೆಲವು ಸಚಿವರು ಗುರುವಾರ ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ ಎಚ್ಎಲ್ ಏರ್ಪೋರ್ಟ್ ನಿಂದ ಹೆಲಿಕಾಪ್ಟರ್ನಲ್ಲಿ ಬೆಟ್ಟಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಭೆ ನಿಗದಿಯಾಗಿದೆ.