ಬೆಂಗಳೂರು:- 2014ರಿಂದ ಆಗಿರುವ ಹಿಂದೂಗಳ ಸಾವಿನ ಕೇಂದ್ರವೇ ಹೊಣೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮತ್ತೊಂದು ಮೈಲಿಗಲ್ಲು ಸಾಧಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. ಅಂತ ಬೈಯೋದು ಬಿಟ್ರೆ ಬೇರೇನು ಮಾಡಿಲ್ಲ ಎಂದರು.
ಸರ್ಜಿಕಲ್ ಸ್ಟ್ರೈಕ್ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ ಬಿಟ್ರೆ ಬೇರೆ ಏನೂ ಇಲ್ಲ. ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಎಂದು ಕಿಡಿ ಕಾರಿದರು.
ಕಳೆದ 11 ವರ್ಷಗಳಿಂದ ದಿನಬೆಳಗಾದ್ರೆ ಹಿಂದೂ ಮುಸ್ಲಿಂ ವಿಚಾರ ಬಿಟ್ಟರೆ ಬೇರೇನಿಲ್ಲ. ಅಲ್ಲಿ ಉಗ್ರರ ದಾಳಿಯಾದಾಗ 2000 ಪ್ರವಾಸಿಗರನ್ನು ಸ್ಥಳಾಂತರ ಮಾಡಿದ್ದು, ಅದೇ ಮುಸ್ಲಿಮರು. ಇನ್ನಾದ್ರೂ ಒಳ್ಳೆಯ ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಅಂತ ಮನವಿ ಮಾಡಿದರು.