ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧದ ಕೊಂಡಿ ಕಳಚಿದೆ. ಹೀಗಾಗಿ ಪಾಕ್ ಮೇಲೆ ಸಾಕಷ್ಟು ಕಠಿಣ ನಿರ್ಧಾರಗಳನ್ನು ಭಾರತ ಕೈಗೊಂಡಿದೆ.
ಎಸ್, ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ವ್ಯಾಪಕವಾಗುತ್ತಿದೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಸರ್ಕಾರ ತೆಗೆದುಕೊಂಡ ಬಳಿಕ ಪಾಕಿಸ್ತಾನದ ಒಬ್ಬೊಬ್ಬರು ಸಚಿವರು ಬಾಲ ಬಿಚ್ಚುತ್ತಿದ್ದಾರೆ.
ಇದೀಗ ಪಾಕ್ ಗೃಹ ಸಚಿವ ನಖ್ವಿ ಯುದ್ಧಕ್ಕೆ ಸಿದ್ಧ ಎಂದು ಬುಸುಗುಟ್ಟಿದ್ದಾರೆ.ಭಾರತವು ಸಿಂಧೂ ಜಲ ಒಪ್ಪಂದವನ್ನ ಏಕಪಕ್ಷೀಯವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ವಿಶ್ವಬ್ಯಾಂಕ್ ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದೆ. ಅಂತಹ ಯಾವುದೇ ಕ್ರಮ ಕೈಗೊಂಡರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಿದೆ ಎಂದು ನಖ್ವಿ ಎಚ್ಚರಿಕೆ ನೀಡಿದ್ದಾರೆ.