Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮಂಡ್ಯ ಉದ್ಯಮಿ ಆತ್ಮಹತ್ಯೆ..! ಕಾರಣವೇನು..?

    By Author AINApril 30, 2025
    Share
    Facebook Twitter LinkedIn Pinterest Email
    Demo

    ವಾಷಿಂಗ್ಟನ್: ಅಮೆರಿಕ ಮೂಲದ ಭಾರತೀಯ ಉದ್ಯಮಿಯೊಬ್ಬರು ತಮ್ಮ ಪತ್ನಿ ಮತ್ತು ಚಿಕ್ಕ ಮಗನನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಏಪ್ರಿಲ್ 24 ರಂದು ವಾಷಿಂಗ್ಟನ್‌ನ ನ್ಯೂಕ್ಯಾಸಲ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನೆಯ ಸಮಯದಲ್ಲಿ ದಂಪತಿಗೆ ಮತ್ತೊಬ್ಬ ಮಗ ಮನೆಯಲ್ಲಿ ಇಲ್ಲದ ಕಾರಣ ಬದುಕುಳಿದಿದ್ದಾನೆ.

    ಮೃತರನ್ನು ಹರ್ಷವರ್ಧನ ಎಸ್ ಕಿಕ್ಕೇರಿ (57), ಶ್ವೇತಾ ಪನ್ಯಂ (44) ಹಾಗೂ ದಂಪತಿಯ 14 ವರ್ಷದ ಮಗ ಎಂದು ಗುರುತಿಸಲಾಗಿದೆ. ಮೃತ ಬಾಲಕ ಹಾಗೂ ಇನ್ನೋರ್ವ ಮಗನ ಗುರುತನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.

    kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ

    ಈ ಉಗ್ರ ಕೃತ್ಯಕ್ಕೆ ಕಾರಣ ಏನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ದಂಪತಿ ಅನ್ಯೋನ್ಯವಾಗಿದ್ದರು, ಅಲ್ಲದೇ ನೆರೆಹೊರೆಯವರ ಬಳಿ ಚೆನ್ನಾಗಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹರ್ಷವರ್ಧನ್, 2017ರಲ್ಲಿ ಅಮೆರಿಕದಿಂದ ಬಂದು, ಮೈಸೂರಿನಲ್ಲಿ ಹೋಲೋವರ್ಲ್ಡ್ ಕಂಪನಿ ಸ್ಥಾಪಿಸಿದ್ದರು. ಅವರ ಪತ್ನಿ ಕಂಪನಿಯ ಸಹ-ಸಂಸ್ಥಾಪಕರಾಗಿದ್ದರು. 2022ರ ಕೋವಿಡ್ -19 ಸಮಯದಲ್ಲಿ ಕಂಪನಿಯು ಬಂದ್‌ ಆಗಿತ್ತು. ಬಳಿಕ ಅವರು ಅಮೆರಿಕಕ್ಕೆ ತೆರಳಿದ್ದರು.

    ಹರ್ಷವರ್ಧನ್ ಗಡಿ ಭದ್ರತೆ ವಿಚಾರದಲ್ಲಿ ರೋಬೋಟ್‌ಗಳನ್ನು ಬಳಸುವ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಇನ್ನೂ ರೊಬೊಟಿಕ್ಸ್‌ನಲ್ಲಿ ಪರಿಣಿತರಾದ ಇವರು ಯುಎಸ್‌ನಲ್ಲಿ ಮೈಕ್ರೋಸಾಫ್ಟ್‌ಗಾಗಿಯೂ ಕೆಲಸ ಮಾಡಿದ್ದರು.

     

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    Thailand: ಥೈಲ್ಯಾಂಡ್ ಪ್ರಧಾನಿ ಶಿನವಾತ್ರ ಸಸ್ಪೆಂಡ್..! ಯಾಕೆ ಗೊತ್ತಾ..?

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಆ “ಬಿಲ್” ಅಂಗೀಕಾರವಾದ್ರೆ ಹೊಸ ರಾಜಕೀಯ ಪಕ್ಷವನ್ನೇ ಸ್ಥಾಪಿಸುತ್ತೇನೆ! Elon Musk ಎಚ್ಚರಿಕೆ

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.