Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    3 ತಿಂಗಳ ಬಳಿಕ ಜೈಲಿನಿಂದ ಹೊರಬಂದ ಬಿಗ್‌ ಬಾಸ್‌ ಖ್ಯಾತಿಯ ಲಾಯರ್‌ ಜಗದೀಶ್‌!

    By Author AINApril 30, 2025
    Share
    Facebook Twitter LinkedIn Pinterest Email
    Demo

    ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಲಾಯರ್ ಜಗದೀಶ್ ಕೊನೆಗೂ ಬಿಡುಗಡೆ ಸಿಕ್ಕಿದೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಲಾಯರ್‌ ಜಗದೀಶ್ ಹಾಗೂ ಸ್ಥಳೀಯರ ನಡುವೆ ದೊಡ್ಡ ಗಲಾಟೆ ನಡೆದಿತ್ತು. ಈ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಿದ ಆರೋಪದ ಮೇಲೆ ಜಗದೀಶ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಆ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಗಲಾಟೆ ವೇಳೆ ಗನ್‌ ಬಳಸಿದ್ದು, ಕಾನೂನು ಬಾಹಿರವಾಗಿ ಗುಂಡು ಹಾರಿಸಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಿಗೇಹಳ್ಳಿ ಪೊಲೀಸರು ಲಾಯರ್ ಜಗದೀಶ್‌, ಜಗದೀಶ್ ಪುತ್ರ, ಗನ್‌ಮ್ಯಾನ್‌ ಮತ್ತು ಕಾರ್‌ ಡ್ರೈವರ್‌ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. 93 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಲಾಯರ್ ಜಗದೀಶ್‌ಗೆ ಏಪ್ರಿಲ್ 29 ರಂದು ಜಾಮೀನು ಲಭಿಸಿದೆ.

    ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿರುವ ಲಾಯರ್‌ ಜಗದೀಶ್‌, ʼನಮಸ್ತೆ ಕರ್ನಾಟಕ, ನಾನು ಕೆ.ಎನ್.ಜಗದೀಶ್ ಕುಮಾರ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದು ಜಗದೀಶ್‌ ಬರೆದುಕೊಂಡಿದ್ದಾರೆ. PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಅಶ್ಲೀಲ ಸ್ಕ್ಯಾಂಡಲ್‌ ಅನ್ನು ಬಹಿರಂಗಪಡಿಸಿದ್ದು, ರವಿ ಡಿ.ಚೆನ್ನಣ್ಣನವರ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು, ಟ್ರಾಫಿಕ್ ಟೋಯಿಂಗ್‌ ಸಿಸ್ಟಂ ಅನ್ನು ನಿಲ್ಲಿಸಿದ್ದು, ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ದು ಇವೆಲ್ಲವೂ ನನ್ನ ಹೋರಾಟದ ಭಾಗʼ ಎಂದಿದ್ದಾರೆ.

    ʼಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯು ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, ಜನವರಿ 25ರಂದು ಸ್ಥಳೀಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ನನಗೆ ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ, ಜೈ ಕರ್ನಾಟಕʼ ಎಂದು ಬರೆದುಕೊಂಡಿದ್ದಾರೆʼ.

    Demo
    Share. Facebook Twitter LinkedIn Email WhatsApp

    Related Posts

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    Viral Photo.. ಸಿನಿಮಾ ಸೆಟ್’ನಲ್ಲಿ ಚಿರಂಜೀವಿ-ಪವನ್ ಕಲ್ಯಾಣ್..! ಯಾವುದು ಆ ಸಿನಿಮಾ..?

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.