Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದ ಚೆನ್ನೈ: CSK ಸೋಲಿಗೆ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ದೋನಿ

    By Author AINMay 1, 2025
    Share
    Facebook Twitter LinkedIn Pinterest Email
    Demo

    ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆದ 2025 ರ ಐಪಿಎಲ್​ನ (IPL 2025) 49ನೇ ಪಂದ್ಯದಲ್ಲೂ ಸಿಎಸ್​ಕೆ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.

    ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್​ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಸಿಎಸ್​ಕೆ ತಂಡ ಅಧಿಕೃತವಾಗಿ ಪ್ಲೇಆಫ್ ರೇಸ್‌ನಿಂದ ಹೊರಬಿತ್ತು.

    ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಈ ಪಂದ್ಯದಲ್ಲಿ ನಾವು ಚೆನ್ನಾಗಿ ಆಡಿದ್ದೆವು. ಅದರಲ್ಲೂ ನಮ್ಮ ಬ್ಯಾಟಿಂಗ್ ಉತ್ತಮವಾಗಿತ್ತು. ಇದೇ ಮೊದಲ ಬಾರಿಗೆ ನಾವು ಸಾಕಷ್ಟು ರನ್​ಗಳಿಸಲು ಯಶಸ್ವಿಯಾದೆವು.

    ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!

    ಆದರೆ ಇದು ಉತ್ತಮ ಸ್ಕೋರ್ ಆಗಿತ್ತೇ ಎಂದು ಕೇಳಿದರೆ, ಖಂಡಿತವಾಗಿಯೂ ಅಲ್ಲ. ಅಂತಿಮ ಹಂತದಲ್ಲಿ ಸ್ಕೋರ್​ಗಳಿಸುವಲ್ಲಿ ನಾವು ಎಡವಿದೆವು. ಕೊನೆಯ ಓವರ್​ಗಳ ವೇಳೆ ಮತ್ತಷ್ಟು ರನ್​ಗಳಿಸಿದ್ದರೆ ಉತ್ತಮ ಪೈಪೋಟಿ ನೀಡಬಹುದಿತ್ತು ಎಂದು ಧೋನಿ ಹೇಳಿದ್ದಾರೆ.

    ನಮ್ಮ ಪರ ಡೆವಾಲ್ಡ್ ಬ್ರೆವಿಸ್ ಮತ್ತು ಸ್ಯಾಮ್ ಕರನ್ ಉತ್ತಮ ಜೊತೆಯಾಟ ಪ್ರದರ್ಶಿಸಿದ್ದರು. ಆದರೆ ಕೊನೆಯ 4 ಎಸೆತಗಳಿರುವಾಗಲೇ ನಾವು ಆಲೌಟ್ ಆಗಿದ್ದು ದುಬಾರಿಯಾಯಿತು. ಅಂತಿಮ ಹಂತದಲ್ಲಿ ನಾಲ್ವರು ಬ್ಯಾಟರ್​ಗಳು ವಿಕೆಟ್ ಒಪ್ಪಿಸಿದ್ದು ಸ್ಕೋರ್ ಕಡಿಮೆಯಾಗುವಂತೆ ಮಾಡಿತು.

    ಇದಾಗ್ಯೂ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದ್ದವು. ಹೀಗಾಗಿ ಬೌಲರ್​ಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಿದ್ದೆವು. ಆದರೆ ನಮ್ಮ ಫೀಲ್ಡರ್​ಗಳು ಮಾಡಿದ ತಪ್ಪಿನಿಂದಾಗಿ ಸೋಲನುಭವಿಸಬೇಕಾಯಿತು. ನಾವು ಕೈ ಬಿಟ್ಟ ಕೆಲ ಕ್ಯಾಚ್​ಗಳು ಇಡೀ ಪಂದ್ಯದ ಮೇಲೆ ಪರಿಣಾಮ ಬೀರಿತು. ಕೈಚೆಲ್ಲಿದ ಕ್ಯಾಚ್​ಗಳಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಬೇಕಾಯಿತು ಎಂದು ಮಹೇಂದ್ರ ಸಿಂಗ್ ಧೋನಿ ಅಭಿಪ್ರಾಯಪಟ್ಟಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025

    ಬ್ಯಾಕ್ ಟು ಬ್ಯಾಕ್ ಸೆಂಚುರಿ: ವಿಶ್ವ ದಾಖಲೆ ಬರೆದ ಫಾಫ್ ಡುಪ್ಲೆಸಿಸ್!

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.