Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾವ್ಯಾರು ಹಿಂದುಗಳು ಅಲ್ವಾ!? ಬಿಜೆಪಿ ಆರೋಪಕ್ಕೆ ಜಿ. ಪರಮೇಶ್ವರ್ ಸಿಡಿಮಿಡಿ!

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಅನ್ನೋ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    SSLC ರಿಸಲ್ಟ್ ಪ್ರಕಟ: ಈ ಬಾರಿ 62.34% ಫಲಿತಾಂಶ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯ ಹತ್ಯೆ ಮಾಡಿದವರು ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಲಿದೆ. ನಿನ್ನೆ ರಾತ್ರಿ 8:30ರ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈಗಾಗಲೇ ನಾವು ಆಕ್ಷನ್ ತೆಗೆದುಕೊಂಡಿದ್ದೇವೆ. ಯಾರು ಈ ಕೆಲಸ ಮಾಡಿದ್ದಾರೆ ಅವರಿಗೆ ಕಾನೂನು ಕ್ರಮ ಆಗಲಿದೆ. ಇದು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ ಎಂದರು.

    ನಾಲ್ಕು ತಂಡಗಳನ್ನು ರಚನೆ ಮಾಡಿ ತನಿಖೆಗೆ ಕಳುಹಿಸಿದ್ದೇವೆ. ಈ ರೀತಿ ಘಟನೆ ಆಗೋದಕ್ಕೆ ಬಿಡಲ್ಲ. ಮಂಗಳೂರು ಜನ ಶಾಂತಿ ಕಾಪಾಡಿ. ಸರ್ಕಾರ ನಿಮ್ಮ ಜೊತೆ ಇರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ. ತನಿಖೆ ಮುಂದುವರೆದಿದ್ದು, ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಆಗಲಿದೆ. ಇದನ್ನು ಯಾವುದೇ ಕಾರಣಕ್ಕೂ ಬೆಳೆಯಲು ಬಿಡಲ್ಲ. ಯಾವುದೇ ಪಕ್ಷದರಾಗಿದ್ದರೂ ಬಿಡಲ್ಲ. ಅದು ಯಾರೇ ಆಗಿದ್ದರೂ ಕೂಡ ಕಠಿಣ ಕ್ರಮ ಆಗಲಿದೆ ಎಂದು ಹೇಳಿದರು

    ನಾವು ಕೊಲೆ ಆಗಬೇಕು ಅಂತ ಬಯಸಲ್ಲ. ಯಾವುದೇ ಸರ್ಕಾರ ಆದರೂ ಶಾಂತಿ ಕಾಪಾಡಲಿ ಅನ್ನುತ್ತದೆ. ಇದನ್ನು ಯಾವ ರೀತಿ ನಿಭಾಯಿಸಬೇಕು. ಯಾವ ರೀತಿ ಕ್ರಮ ಆಗಬೇಕು ಅಂತಾ ನೋಡ್ತಾ ಇದ್ದೀವಿ. ಆರೋಪಿಗಳು ಯಾರು ಇದ್ದಾರೆ ಅವರನ್ನ ಕಾನೂನಿನಡಿಗೆ ತರಲು ಮುಂದಾಗುತ್ತೇವೆ. ಶೀಘ್ರವಾಗಿ ಆರೋಪಿಗಳನ್ನ ಹಿಡಿಯುತ್ತೇವೆ. ನಾವೆಲ್ಲರೂ ಹಿಂದುಗಳೇ, ಕೊಲೆ ಆಗಿದೆ ಕೊಲೆ ಮಾಡಿದವರನ್ನ ಹಿಡಿಯುತ್ತೇವೆ. ಅದಕ್ಕೆ ಈ ರೀತಿ ಹೇಳೋದು ಸರಿಯಲ್ಲ ಎಂದರು.

    ಯಾರೇ ಈ ಕೊಲೆ ಮಾಡಿದವರ ವಿರುದ್ಧ ಕ್ರಮ ಆಗಲಿದೆ. ಹಿಂದೆಯೂ ಕಠಿಣ ಕ್ರಮ ಆಗಿದೆ. ಈಗಲೂ ಕೂಡ ಅದು ಆಗುತ್ತದೆ. ಕಾಂಗ್ರೆಸ್‌ನಲ್ಲಿ ಹಿಂದೂಗಳು ಇಲ್ವಾ. ನಾವ್ಯಾರು ಹಿಂದುಗಳು ಅಲ್ವಾ. ಇದಕ್ಕೆ ಈ ರೀತಿ ವಿಶ್ಲೇಷಣೆ ಮಾಡೋದು ಸರಿ ಅಲ್ಲ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

    June 17, 2025

    ಕಾಲ್ತುಳಿತ ಘಟನೆಗೆ ಜವಾಬ್ದಾರಿಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬೇಕು: ಸಿ.ಟಿ.ರವಿ

    June 17, 2025

    ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    June 17, 2025

    ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಡಿ.ಕೆ.ಶಿವಕುಮಾರ್

    June 17, 2025

    ಗೋಲ್ಡ್ ವಂಚನೆ ಪ್ರಕರಣ: ಡಿ.ಕೆ ಸುರೇಶ್’ಗೆ ಇಡಿ ಸಮನ್ಸ್!

    June 17, 2025

    2028ಕ್ಕೆ ನಾವೇ.. ನಮ್ಮದೇ ಸರ್ಕಾರ: ಬಿಜೆಪಿ ಪ್ರತಿಭಟನೆಗೆ ಡಿಕೆಶಿ ತಿರುಗೇಟು

    June 17, 2025

    ಸರ್ಕಾರದ ವಿರುದ್ಧ BJP ಪ್ರತಿಭಟನೆ: ವಿಮಾನ ದುರಂತಕ್ಕೆ ನಾವು ರಾಜೀನಾಮೆ ಕೇಳಿದ್ವಾ? ಸಿಎಂ ಸಿದ್ದರಾಮಯ್ಯ ಆಕ್ರೋಶ

    June 17, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.