ಬೆಂಗಳೂರು:- ಬೆಂಗಳೂರು ಮೆಟ್ರೋದಲ್ಲಿ ಉಗುಳುವುದು ಮತ್ತು ಕಸ ಎಸೆಯುವುದನ್ನು ತಡೆಯಲು ದಂಡ ವಿಧಿಸುವ ಮೂಲಕ BMRCL ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೂ ಇಂತಹ ಘಟನೆಗಳು ಮತ್ತೆ-ಮತ್ತೆ ಮರುಕಳಿಸುತ್ತಿವೆ.
ಕುಡುಕರ ಪುಂಡಾಟ: ಹೆದ್ದಾರಿಗೆ ಕಾರು ತಂದು ಕಿರಿಕ್, ಪೊಲೀಸರಿಗೆ ಹಲ್ಲೆ, ಮೂವರು ಅರೆಸ್ಟ್!
ಮೆಟ್ರೊ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ BMRCL ದಂಡ ವಿಧಿಸಿದೆ. ಮೇ 2 2025ರ ಸಂಜೆ ಸುಮಾರು 6:30ಕ್ಕೆ ಗ್ರೀನ್ ಲೈನ್ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 01ರ ಲಿಫ್ಟ್ ಬಳಿಯಲ್ಲಿ ಪಾನ್ ಮಸಾಲಾ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರೆ ಪ್ರಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ.
ಸ್ವಚ್ಛತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೋ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.