ಬೆಂಗಳೂರು: ಪಾಕಿಸ್ತಾನ ಭಯೋತ್ಪಾದಕತೆಗೆ ಬೆಂಬಲ ನೀಡುತ್ತಿರುವುದು ಜಗಜ್ಜಾಹೀರಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ 140 ಕೋಟಿ ಜನರ ಬೆಂಬಲ ಇದೆ. ನಮ್ಮ ಜನರ ರಕ್ಷಣೆ ದೇಶದ ರಕ್ಷಣೆ ಗೆ ಎಲ್ಲರ ಬೆಂಬಲ ಇದೆ. ದೇಶ ಪ್ರಥಮ, ಪಕ್ಷ ನಂತರವಾಗಿದೆ.ಯಾವುದೇ ಕ್ರಮಗಳನ್ನು ನಿರ್ಣಯ ಸರ್ಕಾರ ತೆಗೆದುಕೊಂಡರೂ ಅದಕ್ಕೆ ಬೆಂಬಲವಿದೆ ಎಂದರು.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ಇದನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಎಲ್ಲರೂ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ಮಾರ್ಗಸೂಚಿ ಡೈರೆಕ್ಷನ್ ಕೂಡ ಫಾಲೋ ಮಾಡುತ್ತೇವೆ ಎಂದರು.
ನಮ್ಮ ಜನರ ಸುರಕ್ಷತೆ ಮುಖ್ಯವಾಗಿದೆ. ಪಾಕಿಸ್ತಾನ ಭಯೋತ್ಪಾದಕತೆಗೆ ಬೆಂಬಲ ನೀಡುತ್ತಿರುವುದು ಜಗಜ್ಜಾಹೀರಾಗಿದೆ.ಹಾಗಾಗಿ ಯಾವುದೇ ತಗಾದೆ ತಗೆಯದೇ ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.