Close Menu
Ain Live News
    Facebook X (Twitter) Instagram YouTube
    Friday, May 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಿ : ಮಾಲತೇಶ್ ಅರಸ್

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅನೇಕ ಬೆಟ್ಟ ಗುಡ್ಡಗಳಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿದ್ದು ಕಾಡಿನೊಳಗೆ ಇರುವ ಪ್ರಾಣಿ. ಪಕ್ಷಿ, ಜೀವ ವೈವಿಧ್ಯ ಸಂಕುಲ, ಪ್ರಾಕೃತಿಕ ಸಂಪನ್ಮೂಲಗಳು ಮತ್ತು ಮರಗಳು ಬೆಂಕಿಗೆ ಹಾನಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇನ್ನೊಂದೆಡೆ ಕಿಡಿಗೇಡಿಗಳ ಕೃತ್ಯದಿಂದಾಗಿ ಬೆಟ್ಟ-ಗುಡ್ಡಗಳಲ್ಲಿ ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಬೇಕು ಮತ್ತು ಅನಾಹುತ ತಡೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    Operation Sindoor: ಪಾಕ್ ಮೇಲೆ ಭಾರತದ ದಾಳಿ..ಉಗ್ರ ಹಫೀಜ್‌ ಅಡಗುತಾಣ ಡಮಾರ್!

    ಮೇ ತಿಂಗಳಿನಲ್ಲಿ ದಿನೆದಿನೇ ಬಿಸಿಲಿನ ತಾಪಮಾನ ಹೆಚ್ಚಿದ್ದು ಹಲವಾರು ಪ್ರಾಣಿ ಪಕ್ಷಿಗಳಿಗೆ ತಿನ್ನಲು ಆಹಾರ, ನೀರು ಇಲ್ಲದಂತಾಗಿರುವ ಈ ಸಂದರ್ಭದಲ್ಲಿ ಗುಡ್ಡಕ್ಕೆ ಬೆಂಕಿ ತಗುಲುವುದರಿಂದ ಪಕ್ಷಿಗಳಿಗೆ ಸರಿಸೃಪಗಳಿಗೆ ಗುಡ್ಡದಲ್ಲಿರುವ ಆಹಾರವಾಗಿರುವ ಲಕ್ಷಾಂತರ ಕೀಟಗಳು ಸತ್ತು ಹೋಗುವ ಪರಿಣಾಮ ಹಲವಾರು ಪ್ರಾಣಿಗಳಿಗೆ ಆಹಾರದ ಕೊರತೆ ಉಂಟಾಗುತ್ತದೆ ಎಂದಿದ್ದಾರೆ.

    ಬೇಸಿಗೆ ಬಂತೆಂದರೆ ಕಾಡಿನ ಬೆಂಕಿ ಪ್ರಮಾಣ ಅಧಿಕವಾಗುತ್ತಾ ಹೋಗುತ್ತದೆ. ಒಣಗಿ ಮಳೆಗೆ ಕಾದು ನಿಂತ ಮುಗಿಲೆತ್ತರದ ಮರಗಳು, ಕುರುಚಲು ಅರಣ್ಯ ಪ್ರದೇಶಗಳು ಬೆಂಕಿಗೆ ಆಹುತಿಯಾಗುತ್ತವೆ. ಅಷ್ಟೇ ಅಲ್ಲ ಅರಣ್ಯವನ್ನು ಉಳಿಸುವ ಪ್ರಾಣಿಗಳಿಂದ ಹಿಡಿದು ಸಣ್ಣ ಸಣ್ಣ ಪ್ರಾಣಿ, ಪಕ್ಷಿಗಳು ಕಾಡಿನ ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತವೆ. ಅದೆಷ್ಟೋ ಸೂಕ್ತ ಜೀವಿಗಳು ಅಳಿದು ಹೋಗುತ್ತವೆ. ಮರ, ಗಿಡಗಳ ಲೆಕ್ಕವೇ ಇಲ್ಲ ಎಲ್ಲವೂ ಸುಟ್ಟು ಹೋಗುತ್ತದೆ.

    ಬೆಂಕಿ ಹಚ್ಚಿರುವ ಕೆಲವು ಗುಡ್ಡಗಳಲ್ಲಿ ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಮತ್ತು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ತಂಡದೊಂದಿಗೆ ಅದರ ವೀಕ್ಷಣೆ ಮಾಡಿ ಮತ್ತು ಅಪಾಯದ ಹಿನ್ನೆಲೆಯನ್ನ ಅಧ್ಯಯನ ಮಾಡುವ ಕೆಲಸವನ್ನು ಮಾಡಿ ಬೆಂಕಿ ದುರಂತದ ತಡೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇದೀಗ ಅದನ್ನು ತಡೆಯಲು ವಿವಿಧ ಬೋಳು ಬೆಟ್ಟ ಗುಡ್ಡಗಳನ್ನು ಹಸಿರುವನ ವನ್ನಾಗಿ ಮಾಡಲು ಸನ್ನದ್ದವಾಗಿದೆ. ಜೊತೆಗೆ ಅರಣ್ಯ ಇಲಾಖೆಯ ಜೊತೆ ನಮ್ಮ ಗುರುಕುಲ ಹಸಿರು ರಾಯಭಾರಿಗಳ ತಂಡ, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಜೊತೆಯಲ್ಲಿ ಇರಲಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್, ರಾಜ್ಯ ಸಂಚಾಲಕರಾದ ಟಿ.ರುದ್ರಮುನಿ, ಜಲ ಜಾಗೃತಿ ವಿಭಾಗದ ಉಪಾಧ್ಯಕ್ಷರಾದ ಕೆ. ಓಂಕಾರಪ್ಪ ಮನವಿ ಮಾಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    May 9, 2025

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025

    ಸೈನಿಕರ ಶ್ರೇಯೋಭಿವೃದ್ಧಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್‌ ಅಹ್ಮದ್‌!

    May 9, 2025

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    May 9, 2025

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    May 9, 2025

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ʼನಲ್ಲಿ ಹೈಅಲರ್ಟ್!

    May 9, 2025

    ಭಾರತ-ಪಾಕ್‌ ಯುದ್ಧ: ಐಪಿಎಲ್‌ ಟೂರ್ನಿ ಮುಂದೂಡಿಕೆ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.