Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ‘ಆಪರೇಷನ್ ಸಿಂಧೂರ’: ಕಾರ್ಯಚರಣೆ ಬಗ್ಗೆ ಮಾಹಿತಿ ಕೊಟ್ಟ ಈ ಲೇಡಿ ಆಫೀಸರ್ಸ್ ಯಾರು.? ಇಲ್ಲಿದೆ ಡಿಟೈಲ್ಸ್

    By Author AINMay 7, 2025
    Share
    Facebook Twitter LinkedIn Pinterest Email
    Demo

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರದಲ್ಲಿ ಭಾರತ ಪಾಕಿಸ್ತಾನದ ಮೇಲೆ ತೀವ್ರ ಪ್ರತೀಕಾರದ ತೀರಿಸಿಕೊಂಡಿದೆ. ಈಗಾಗಲೇ ಪಾಕ್ ದಾಳಿ ನಡೆಸಿದ ಹದಿಮೂರು ದಿನಗಳಲ್ಲೇ ಪಾಕ್ ಮೇಲೆ ದಾಳಿ ನಡೆಸುವ ಮೂಲಕ ಸರಿಯಾದ ಉತ್ತರ ನೀಡಿದೆ. ಈ ಹಿಂದೆ ನಡೆದ ಬಾಲ್ ಕೋಟೆ ದಾಳಿ, ಪುಲ್ವಾಮ ದಾಳಿ ಹಾಗೂ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿ ಸೇರಿದಂತೆ ಈ ಮೂರು ದಾಳಿಗೂ 11, 12 ಹಾಗೂ 13 ದಿನಗಳಲ್ಲಿಯೇ ಭಾರತ ಪ್ರತೀಕಾರ ತೀರಿಸುವಲ್ಲಿ ಯಶಸ್ವಿಯಾಗಿದೆ. ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು, ಇಬ್ಬರು ಮಹಿಳಾ ಅಧಿಕಾರಿಗಳೇ ಮುಖ್ಯ ಮಾಹಿತಿ ನೀಡಿದರು.

    Operation Sindoor: ಜಸ್ಟ್ 23 ನಿಮಿಷಕ್ಕೆ ಪಾಕ್ ಶೇಕ್… ಭಾರತದ ದಾಳಿ ಹೇಗಿತ್ತು? ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    ಭಾರತ ವಿದೇಶಾಂಗ ಸಚಿವಾಲಯ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಆಪರೇಷನ್‌ ಸಿಂಧೂರದ (Operation Sindoor) ಕುರಿತು ಮಹಿಳಾ ಅಧಿಕಾರಿಗಳಿಂದಲೇ ಮಾಹಿತಿ ಕೊಡಿಸಲಾಯಿತು. ಏಕೆಂದರೆ ಪಹಲ್ಗಾಮ್‌ ದಾಳಿಯಲ್ಲಿ 26 ಮಹಿಳೆಯರ ಸಿಂಧೂರ ಅಳಿಸಲಾಗಿತ್ತು, ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತ ಮಹಿಳಾ ಅಧಿಕಾರಿಗಳಿಂದಲೇ ದಾಳಿಯ ವಿವರ ಕೊಡಿಸಿದೆ.

    https://ainkannada.com/wp-content/uploads/2025/05/WhatsApp-Video-2025-05-07-at-13.51.46_3bc5381c.mp4

    ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌
    2004ರ ಡಿ.18ರಲ್ಲಿ ಭಾರತೀಯ ವಾಯುಪಡೆಗೆ (IAF) ನಿಯೋಜನೆಗೊಂಡ ವ್ಯೂಮಿಕಾ ಸಿಂಗ್‌ ಅವರು ಪ್ರಸ್ತುತ ಅತ್ಯುತ್ತಮ ವಿಂಗ್‌ ಕಮಾಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಚೀತಾ, ಚೇತಕ್‌ನಂತಹ ಯುದ್ಧ ಹೆಲಿಕಾಪ್ಟರ್‌ಗಳನ್ನು ಹಾರಿಸುವಲ್ಲಿ ಪರಿಣತಿ ಹೊಂದಿದ್ದಾರೆ. ವಾಯುಪಡೆಗೆ ನಿಯೋಜನೆಗೊಂಡ ಆರಂಭದಲ್ಲಿ ಹೆಲಿಕಾಪ್ಟರ್‌ ಪೈಲಟ್‌ ಆಗಿದ್ದರು, ಸತತ ಕಠಿಣ ಪರಿಶ್ರಮದಿಂದ 13 ವರ್ಷಗಳ ಬಳಿಕ ಅಂದ್ರೆ 2017 ಡಿ.18ರಲ್ಲಿ ಇವರಿಗೆ ವಿಂಗ್‌ ಕಮಾಂಡರ್‌ ಹುದ್ದೆ ನೀಡಲಾಯಿತು. 2021ರಲ್ಲಿ ವ್ಯೋಮಿಕಾ ಸಿಂಗ್‌ ಮಣಿರಾಂಗ್‌ ಪರ್ವತ ಏರಿದ ವಾಯುಪಡೆಯ ಮಹಿಳಾ ವಿಭಾಗದ ಭಾಗವಾಗಿದ್ದರು. ಇದು ಐತಿಹಾಸಿಕ ಸಾಧನೆಯೂ ಆಗಿತ್ತು.

    6ನೇ ತರಗತಿಯಲ್ಲಿ ಕಂಡ ಕನಸು
    ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ ಸಾವಿರಾರು ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ. ಆದ್ರೆ ಇಂದಿನ ಸಾಧನೆ ಸಾಮಾನ್ಯವಾದುದ್ದಲ್ಲ, ಇದು 6ನೇ ತರಗತಿಯಲ್ಲೇ ಕಂಡ ಕನಸು, ಈ ಬಗ್ಗೆ ಹಿಂದೊಮ್ಮೆ ವ್ಯೂಮಿಕಾ ಅವರೇ ಹೇಳಿಕೊಂಡಿದ್ದರು. 6ನೇ ತರಗತಿಯಲ್ಲಿದ್ದಾಗ ನನ್ನ ಹೆಸರಿನ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಾನು ಅರ್ಥ ಕೇಳಿದಾಗ ವ್ಯೂಮಿಕಾ ಅಂದ್ರೆ ಆಕಾಶವನ್ನ ತನ್ನ ಮುಷ್ಟಿಯಲ್ಲಿ ಹಿಡಿದಿರುವವರು ಎಂದರ್ಥ ಅಂತ ಹೇಳಿದ್ದರು, ಈಗ ಆಕಾಶವೇ ನನ್ನದಾಗಿದೆ ಎಂದಿದ್ದರು ವ್ಯೂಮಿಕಾ.

    https://ainkannada.com/wp-content/uploads/2025/05/WhatsApp-Video-2025-05-07-at-13.52.41_44fba8f3.mp4

    ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಗೊತ್ತಾ?
    ಇನ್ನೂ ʻಆಪರೇಷನ್‌ ಸಿಂಧೂರʼದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ  ಪ್ರಸ್ತುತ ಭಾರತೀಯ ಸೇನೆಯ ಸಿಗ್ನಲ್ಸ್ ದಳದ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ ಇತಿಹಾಸ ನಿರ್ಮಿಸಿದ್ದರು. ಆ ಸಮಯದಲ್ಲಿ ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತಿನಲ್ಲಿ ಅವರು ಭಾರತದ ತಂಡವನ್ನು ಮುನ್ನಡೆಸಿದ್ದರಲ್ಲದೇ ಪಾಲ್ಗೊಂಡಿದ್ದ 18 ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್‌ ಆಗಿದ್ದರು.

    ಗುಜರಾತ್‌ ಮೂಲದ ಕರ್ನಲ್‌ ಸೋಫಿಯಾ ಖುರೇಷಿ (35 ವರ್ಷ) ಮೂಲತಃ ಮಿಲಿಟರಿ ಕುಟುಂಬಕ್ಕೆ ಸೇರಿದವರು. ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1999 ರಲ್ಲಿ ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಲೆಫ್ಟಿನೆಂಟ್ ಆಗಿ ನೇಮಕಗೊಂಡರು. ಖುರೇಷಿ 2006 ರಲ್ಲಿ ಕಾಂಗೋದಲ್ಲಿ ನಡೆದ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.

     

     

     

     

     

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    Smriti Mandhana: ಭಾರತೀಯ ಸೈನಿಕರ ಬಗ್ಗೆ ಭಾವನಾತ್ಮಕ ಟ್ವೀಟ್ ಮಾಡಿದ ಲೇಡಿ ಕೊಹ್ಲಿ..!

    May 11, 2025

    Pulwama Attack: ಪುಲ್ವಾಮಾ ದಾಳಿ ಮಾಡಿಸಿದ್ದು ನಾವೇ: 6 ವರ್ಷಗಳ ಬಳಿಕ ಒಪ್ಪಿಕೊಂಡ ಪಾಪಿ ಪಾಕ್.!

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Operation Sindoor: ‘ಆಪರೇಷನ್ ಸಿಂಧೂರ’ ಸಿನಿಮಾ ಪೋಸ್ಟರ್ ರಿಲೀಸ್: ಕ್ಷಮೆ ಕೇಳಿದ ನಿರ್ದೇಶಕ..! ಯಾಕೆ ಗೊತ್ತಾ..?

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025

    ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಗಡಿಭಾಗಗಳಲ್ಲಿ ಡ್ರೋನ್‌-ಶೆಲ್‌ʼಗಳಿಂದ ದಾಳಿ!

    May 11, 2025

    IPL 2025: ದೇಶದಲ್ಲಿ ನಾವು ಶಾಂತಿಯಿಂದ ಇರುವುದಕ್ಕೆ ಯೋಧರ ತ್ಯಾಗವೇ ಕಾರಣ: ಸೌರವ್ ಗಂಗೂಲಿ

    May 11, 2025

    Mothers Day Special: ಅಮ್ಮಂದಿರ ದಿನಕ್ಕೆ ನಿಮ್ಮ ಪ್ರೀತಿಯ ಅಮ್ಮನಿಗೆ ಹೀಗೆ ಶುಭಾಶಯ ಕೋರಿ!

    May 11, 2025

    ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳು: ಇಲ್ಲಿದೆ ಚಾರ್ಜ್ ಮಾಡದೆ 50 ವರ್ಷಗಳ ಕಾಲ ಕೆಲಸ ಮಾಡುವ ಬ್ಯಾಟರಿ!

    May 11, 2025

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    May 11, 2025

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.