Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    20 ವರ್ಷದ ಬಳಿಕ ರೀ-ರಿಲೀಸ್‌ ಆಗ್ತಿದೆ ಸೈನೈಡ್‌..10 ನಿಮಿಷ ಹೆಚ್ಚುವರಿ ದೃಶ್ಯ ಸೇರ್ಪಡಣೆ!

    By Author AINMay 8, 2025
    Share
    Facebook Twitter LinkedIn Pinterest Email
    Demo

    ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಚಿತ್ರ “ಸೈನೈಡ್”. ಅಕ್ಷಯ್ ಕ್ರಿಯೇಷನ್ಸ್ ನಲ್ಲಿ ಕೆಂಚಪ್ಪ ಗೌಡ ಹಾಗೂ ಎಸ್ ಇಂದುಮತಿ ನಿರ್ಮಿಸಿದ್ದ, AMR ರಮೇಶ್ ನಿರ್ದೇಶಿಸಿದ್ದ ಹಾಗೂ ತಾರಾ, ರಂಗಾಯಣ ರಘು, ರವಿಕಾಳೆ, ಮಾಳವಿಕ, ಅವಿನಾಶ್, ಉಷಾ ಭಂಡಾರಿ ಮುಂತಾದವರು ಅಭಿನಯಿಸಿದ್ದ “ಸೈನೈಡ್” ಚಿತ್ರ 2006 ರಲ್ಲಿ ಬಿಡುಗಡೆಯಾಗಿ ಜನಪ್ರಿಯವಾಗಿತ್ತು. ಈಗ ಇಪ್ಪತ್ತು ವರ್ಷಗಳ ಬಳಿಕ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ದೇಶಕ AMR ರಮೇಶ್ ನಿರ್ದೇಶಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಶಾಸಕ ಹ್ಯಾರಿಸ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    “ಸೈನೈಡ್”, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಬಳಿಕ ನಡೆದ ಘಟನೆ ಆಧರಿಸಿದ ಚಿತ್ರ.‌ 2006 ರಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವಾಗ ಸೂಕ್ಷ್ಮವಾದ ವಿಷಯದ ಕುರಿತಾದ ಸಿನಿಮಾ. ಏನಾಗುತ್ತದೊ ಏನೋ. ಎಂಬ ಆತಂಕವಿತ್ತು. ಆದರೆ ಬಿಡುಗಡೆ ಆದ ಮೇಲೆ‌ ಜನ ಈ ಚಿತ್ರ ಸ್ವೀಕರಿಸಿದ ರೀತಿ ಕಂಡು ಆತಂಕ ದೂರವಾಯಿತು. ನಾಡಿನ ಖ್ಯಾತ ಸಾಹಿತಿಗಳು, ನಟರು ಹಾಗೂ‌ ನಿರ್ದೇಶಕರು ಸಹ ಈ ಚಿತ್ರದ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದರು. ತಾರಾ ಅವರ ಪಾತ್ರಕ್ಕೆ ರಾಜ್ಯ ಪ್ರಶಸ್ತಿ ತಂದುಕೊಟ್ಟ ಚಿತ್ರ ಕೂಡ ಇದ್ದಾಗಿತ್ತು. ಪ್ರಸ್ತುತ ಈ ಚಿತ್ರವನ್ನು ಈಗಿನ ಕೆಲವು ತಂತ್ರಜ್ಞಾನಗಳನ್ನು ಅಳವಡಿಸಿ‌ ಜೊತೆಗೆ ಹತ್ತು ನಿಮಿಷ ಸಿನಿಮಾ ಅವಧಿಯನ್ನು ಹೆಚ್ಚಿಸಿ ಮೇ 23 ರಂದು ಮರು ಬಿಡುಗಡೆ ಮಾಡುತ್ತಿದ್ದೇವೆ. ” ಸೈನೈಡ್” ಚಿತ್ರದ ಪ್ರೀಕ್ವೆಲ್ ಸಹ ಬರಲಿದ್ದು, ಅದರ ಕಾರ್ಯಗತಿಯೂ‌ ಸಹ ಪ್ರಗತಿಯಲ್ಲಿದೆ ಎಂದು ನಿರ್ದೇಶಕ AMR ರಮೇಶ್ ತಿಳಿಸಿದರು.

    ನಾನು “ಸೈನೈಡ್” ಚಿತ್ರದಲ್ಲಿ ಮೃದುಲ ಎಂಬ ಮುಗ್ಧ ಹೆಣ್ಣು ಮಗಳ ಪಾತ್ರ ನಿರ್ವಹಿಸಿದ್ದೆ. ಇಪ್ಪತ್ತು ವರ್ಷಗಳ ಹಿಂದೆ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ನಾನು ಮೃದುಲ ಅವರನ್ನು ಭೇಟಿ ಮಾಡಲು ಪ್ರಯತ್ನ ಪಟ್ಟೆ . ಆಗಲಿಲ್ಲ. ಅವರ ಪತಿ ರಂಗನಾಥ್ ಚಿತ್ರೀಕರಣ ಸ್ಥಳಕ್ಕೆ ಬರುತ್ತಿದ್ದರು. ಅವರಿಂದ ಮೃದುಲ ಅವರ ಸ್ವಭಾವ ತಿಳಿದುಕೊಂಡು ನಟಿಸಿದ್ದೆ. ನನ್ನ ಪಾತ್ರಕ್ಕೆ ರಾಜ್ಯ ಪ್ರಶಸ್ತಿ ಕೂಡ ಬಂತು.‌ ಈಗ ರಮೇಶ್ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯ ಅವರಿ ಈ ಚಿತ್ರದ ತುಣುಕು ನೋಡಿದರು. ಚಿತ್ರವನ್ನು ಸಹ‌ ನೋಡುತ್ತೇನೆ ಎಂದು ಹೇಳಿದ್ದಾರೆ ಎಂದು ನಟಿ ತಾರಾ ತಿಳಿಸಿದರು.

    “ಸೈನೈಡ್” ಚಿತ್ರದಲ್ಲಿ ಟೆರರಿಸ್ಟ್ ಪಾತ್ರ ಮಾಡಿದ್ದನ್ನು ನಟಿ ಉಷಾ ಭಂಡಾರಿ ನೆನಪಿಕೊಂಡರು. ನಿರ್ಮಾಪಕರಾದ ಕೆಂಚಪ್ಪ ಗೌಡ, ಎಸ್ ಇಂದುಮತಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕನ್ನಡದ ಹೃತಿಕ್‌ ರೋಷನ್‌ ಸ್ಟೈಲೀಶ್‌ ಪೋಸ್..ಮದುಮಗನಂತೆ ಮಿಂಚಿದ ಇಂದ್ರಜಿತ್‌ ಲಂಕೇಶ್‌ ಪುತ್ರ!

    May 8, 2025

    ʼಆಪರೇಷನ್‌ ಸಿಂಧೂರʼ ಸಿನಿಮಾ ಮಾಡಲು ಮುಗಿಬಿದ್ದ ನಿರ್ಮಾಪಕರು..ಯಾರ ಪಾಲಾಗಲಿದೆ ಟೈಟಲ್?‌

    May 8, 2025

    ಚೈತ್ರಾ ಕುಂದಾಪುರ ಕೈಯಲ್ಲಿ ಗೋರಂಟಿ ರಂಗು..ಹಸೆಮಣೆ ಏರಲು ರೆಡಿನಾ?

    May 8, 2025

    ರಾಜಪುತ್ತಿರನ್: ಸೆನ್ಸೇಷನ್ ಸ್ಟಾರ್ ಕೋಮಲ್ ಕುಮಾರ್ ಕಾಲಿವುಡ್ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ

    May 8, 2025

    ಸೋನು ನಿಗಮ್‌ ಹಾಡಿಗೆ ಕೋಕ್‌..ಕನ್ನಡ ಸಿಂಗರ್‌ಗೆ ಚಾನ್ಸ್..ಇದಪ್ಪಾ ಕನ್ನಡ ಪ್ರೀತಿ!

    May 8, 2025

    Soniya Bansal: ನನ್ನ ಬಳಿ ಹಣವಿತ್ತು, ಜನಪ್ರಿಯತೆಯೂ ಇತ್ತು ಆದ್ರೆ ನೆಮ್ಮದಿ ಇಲ್ಲ: ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ನಟಿ..!

    May 8, 2025

    ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ..ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್

    May 8, 2025

    ನೀವು ಕೂಡ ಭಯೋತ್ಪಾದಕರೇ.. ಧ್ರುವ ಸರ್ಜಾ ಹೀಗೆ ಹೇಳಿದ್ದು ಯಾರಿಗೆ?

    May 7, 2025

    Operation Sindoora: ನಮಗೆ ಸವಾಲು ಹಾಕಿದ್ರೆ ನಾವು ಬಲಶಾಲಿಯಾಗಿ ನಿಲ್ಲುತ್ತೇವೆ: ನಟ ಮೋಹನ್ ಲಾಲ್

    May 7, 2025

    ಜೀ಼ ಕನ್ನಡದಲ್ಲಿ ಹಾರರ್ ಹಾಗು ಕಾಮಿಡಿ ಕಿಕ್ ನ ‘ಛೂ ಮಂತರ್’

    May 7, 2025

    ಭಾರತದ ʼಆಪರೇಷನ್‌ ಸಿಂಧೂರʼ ಕಾರ್ಯಾಚರಣೆ ಖಂಡಿಸಿದ ಪಾಕ್‌ ಕಲಾವಿದರು!

    May 7, 2025

    Rajinikanth: ಯಾವುದೇ ಕಾರಣಕ್ಕೂ ಹಿಂದೆ ಸರಿಯೋ ಮಾತಿಲ್ಲ: ಸಿಂಧೂರ ಆಪರೇಷನ್ ಬಗ್ಗೆ ರಜನಿಕಾಂತ್ ಹೇಳಿದ್ದೇನು..?

    May 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.