ಬೆಂಗಳೂರು: ಆಪರೇಷನ್ ಸಿಂಧೂರದಿಂದ ಕಂಗೆಟ್ಟಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರದ ಹಲವೆಡೆ ಮಿಸೈಲ್ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ. 35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ.
ಹಾಗಾಗಿ ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಇತ್ತ ಕರ್ನಾಟದಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಬ್ಬಂದಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹಲವು ಸೂಚನೆ ನೀಡಿದ್ದಾರೆ.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅವಶ್ಯ ಸಾಮಾಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಎಲ್ಲಾ ಪೊಲೀಸರಿಗೂ ತಿಳಿದಿದೆ. ಪೊಲೀಸರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಬೆಂಗಳೂರಿನಲ್ಲಿ ಡಿಸಿಪಿಗಳು ಹಾಗೂ ಎಸಿಪಿಗಳು ನಿಗಾ ವಹಿಸಬೇಕು. ಕೇಂದ್ರ, ರಾಜ್ಯ ಸರ್ಕಾರದ ಸೂಚನೆ ಪಾಲಿಸಬೇಕು. ಮಾಕ್ ಡ್ರಿಲ್ ಬಗ್ಗೆ ಜನರಿಗೆ ಪೊಲೀಸರು ಅರಿವು ಮೂಡಿಸಬೇಕು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ.