Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸದ್ಯದಲ್ಲೇ ರಾಜಧಾನಿ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು !

    By Author AINMay 12, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ಸುಳಿವು ನೀಡಿದ್ದಾರೆ.

    ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 4 ಎಂಎಲ್ ಡಿ ಸಾಮರ್ಥ್ಯದ ಜಲಾಗಾರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

    ಇಂದು ಶಂಕುಸ್ಥಾಪನೆ ಮಾಡಿರುವ ಯೋಜನೆ ಸುಮಾರು 30 ಸಾವಿರ ಮನೆಗಳು, 2.50 ಲಕ್ಷ ಜನರಿಗೆ ನೀರು ಪೂರೈಸಲಿದೆ. ಈ ಕ್ಷೇತ್ರದಲ್ಲಿ ರಸ್ತೆಗೆ 130ಕೋಟಿ, ಮೇಲ್ಸೇತುವೆಗೆ 43 ಕೋಟಿ, 320 ಕೋಟಿ ಇತರೆ ವಾರ್ಡ್ ಅಭಿವೃದ್ಧಿಗೆ, 650 ಕೋಟಿ ವೆಚ್ಚದಲ್ಲಿ ಹೊಸ ಫ್ಲೈಓವರ್, ನಿಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ರವಾನಿಸಲಾಗುವುದು. ಇದನ್ನು ಸದ್ಯದಲ್ಲೇ ದೊಡ್ಡ ಆಂದೋಲನದ ರೀತಿಯಲ್ಲಿ ಮಾಡಲಾಗುವುದು. 50X80 ವಿಸ್ತೀರ್ಣದಲ್ಲಿ ಮನೆ ನಿರ್ಮಿಸಲು ಪ್ಲಾನ್ ಅನುಮತಿ ಪಡೆಯಲು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡಲಾಗುವುದು” ಎಂದು ಹೇಳಿದರು.

    “ಗ್ರೇಟರ್ ಬೆಂಗಳೂರು ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಇದು ಚಾಲನೆಯಾಗಲಿದೆ. ಇದಾದ ತಕ್ಷಣ ಬೆಂಗಳೂರಿನಲ್ಲಿ ಸ್ವಚ್ಛತಾ ಅಭಿಯಾನ ಮಾಡಲಾಗುವುದು. ಪಾಲಿಕೆಯ ಸಹಾಯವಾಣಿ ನೀಡಿ ಬೆಂಗಳೂರಿನಲ್ಲಿ ಎಲ್ಲಿ ಕಸ ಇದೆ ಎಂದು ಸಾರ್ವಜನಿಕರು ಹೇಳಿದರೂ ಪಾಲಿಕೆ ವತಿಯಿಂದ ಅದನ್ನು ಸ್ವಚ್ಛಗೊಳಿಸಲಾಗುವುದು. ಆಮೂಲಕ ಸ್ವಚ್ಛ ಬೆಂಗಳೂರು ರೂಪಿಸಲಾಗುವುದು” ಎಂದರು.

    “ನಾವು ಕೊಟ್ಟ ಮಾತಿನಂತೆ ಯೋಜನೆಗಳನ್ನು ನೀಡುತ್ತಾ ಬಂದಿದ್ದೇವೆ. ಕೊಟ್ಟ ಭರವಸೆಗಳನ್ನು ಸರಿಯಾಗಿ ಈಡೇರಿಸಿಕೊಂಡು ಬಂದಿರುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ, ಅಚ್ಛೇ ದಿನ ಕೊಡುತ್ತೇವೆ ಎಂದು ಹೇಳಿದ್ದರಲ್ಲಾ ಕೊಟ್ಟರಾ? ಬಿಜೆಪಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ, ಆದಾಯ ಪಾತಾಳಕ್ಕೆ ಕುಸಿದ ಕಾರಣ ನಾವು ಈ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಬೆಲೆ ಏರಿಕೆ ಮಧ್ಯೆ ನಿಮ್ಮ ಜೀವನ ಸುಗಮವಾಗಿ ಸಾಗಬೇಕು ಎಂದು ಈ ಯೋಜನೆ ನೀಡಿದ್ದೇವೆ” ಎಂದರು.

    “ಸಮಾಜದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಎಲ್ಲಾ ಜಾತಿ, ಧರ್ಮ, ಸಂವಿಧಾನ ರಕ್ಷಣೆ ಮಾಡಿ, ಎಲ್ಲಾ ವರ್ಗದವರಿಗೂ ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಡಬೇಕು. ಇಂದು ನಡೆಯುತ್ತಿರುವ ನೀರಿನ ಕಾಮಗಾರಿ ಯೋಜನೆ ಮೂಲಕ ಎ.ಸಿ ಶ್ರೀನಿವಾಸ್ ಅವರು ಈ ಕ್ಷೇತ್ರದ ಇತಿಹಾಸ ಪುಟಕ್ಕೆ ಸೇರಿದ್ದಾರೆ. ನಿಮ್ಮ ಮನೆಗಳಿಗೆ ಶಾಶ್ವತವಾಗಿ ಕುಡಿಯುವ ನೀರನ್ನು ನೀಡಬೇಕು ಎಂದು ಈ ಯೋಜನೆಯನ್ನು ಶ್ರೀನಿವಾಸ್ ಮಾಡಿಸುತ್ತಿದ್ದಾರೆ” ಎಂದರು.

    “ಏಕತೆಯಲ್ಲಿ ಶಕ್ತಿ ಇದೆ. ಎಲ್ಲರೂ ಒಂದಾಗಿ ಸೇರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತದೆ. ಆದರೆ ಎಲ್ಲರನ್ನು ವಿಭಜನೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ನಿಮ್ಮ ಸಮಸ್ಯೆಗಳನ್ನು ಶ್ರೀನಿಸಾವ್ ಅವರು ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಹೆಚ್ಚು ಬಡವರಿದ್ದೀರಿ. ನಿಮ್ಮ ಬದುಕಿನಲ್ಲಿ ನೆರವಾಗಲು ನಮ್ಮ ಸರ್ಕಾರ ಇದೆ” ಎಂದು ತಿಳಿಸಿದರು.

    Operation Sindoor ಕದನ ವಿರಾಮ: ಉಕ್ರೇನ್-ರಷ್ಯಾ ಯುದ್ಧ ಪ್ರಸ್ತಾಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು ?

    “ಮೊನ್ನೆಯಷ್ಟೇ ಮನೆಮನೆಗೆ ಕಾವೇರಿ, ಸಂಚಾರಿ ಕಾವೇರಿ ಯೋಜನೆ ಮೂಲಕ 650 ರೂಪಾಯಿಗೆ ಟ್ಯಾಕಂರ್ ನೀರು ಪೂರೈಸಲು ಮುಂದಾಗಿದ್ದಾರೆ. ಟ್ಯಾಂಕರ್ ನೀರಿನ ಮಾಫಿಯಾ ತಡೆಗಟ್ಟಲು ಈ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಮೂಲಕ ಮನೆ ಮನೆಗೆ ಶುದ್ಧ ಕಾವೇರಿ ನೀರು ಪೂರೈಸಲಾಗುತ್ತಿದೆ. ನಾನು ಅಧಿಕಾರಕ್ಕೆ ಬಂದ ನಂತರ ಕಾವೇರಿ ಐದನೇ ಹಂತದ ಯೋಜನೆ ಜಾರಿ ಮಾಡಲಾಗಿದೆ. ನಂತರ ಬೆಂಗಳೂರಿಗೆ ಪೂರೈಸಲು ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ನೀಡಲಾಗಿದೆ. ಆಮೂಲಕ ಮುಂದಿನ 30-40 ವರ್ಷಗಳ ಕಾಲ ಬೆಂಗಳೂರಿಗೆ ಕುಡಿಯಲು ನೀರನ್ನು ಪೂರೈಸಬಹುದು” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.