ಬೆಂಗಳೂರು:-ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ ನಲ್ಲಿ ಇತ್ತೀಚೆಗೆ ನಡೆದಿದ್ದ ʻಆಪರೇಷನ್ ಸಿಂಧೂರʼ ವಿಜಯೋತ್ಸವದ ವೇಳೆ ಟೆಕ್ಕಿಯೋರ್ವ ಪಾಕ್ ಪರ ಘೋಷಣೆ ಕೂಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೆಕ್ಕಿಯನ್ನು ಅರೆಸ್ಟ್ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಂದೆಯನ್ನೇ ಕೊಲೆಗೈದು ಕರೆಂಟ್ ಶಾಕ್ ಕತೆಕಟ್ಟಿದ್ದ ಪಾಪಿ ಮಗನ ಕೃತ್ಯ ಸಿಸಿಟಿವಿಯಲ್ಲಿ ಬಯಲು!
ಛತ್ತಿಸ್ಗಢ ಮೂಲದ ಶುಭಾಂಶು ಶುಕ್ಲಾ(26) ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ.
ಬಡಾವಣೆ ನಿವಾಸಿಗಳು ಸಂಭ್ರಮಾಚರಣೆ ನಡೆಸುವ ವೇಳೆ ಪಿಜಿಯಲ್ಲೇ ಇದ್ದ ಶುಭಾಂಶು ಬಾಲ್ಕನಿಗೆ ಬಂದು ಪಾಕಿಸ್ತಾನ ಪರ ಜೋರಾಗಿ ಘೋಷಣೆ ಕೂಗಿದ್ದಾನೆ. ಈ ವೇಳೆ ಆತಂಕಗೊಂಡ ಕೆಲ ಪಿಜಿ ಯುವಕರು ಹೊರಬಂದು ನೋಡಿದಾಗ ಶುಭಾಂಶು ಬಾಲ್ಕನಿಯಲ್ಲಿ ನಿಂತು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ. ಬಳಿಕ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ವೈಟ್ಫೀಲ್ಡ್ ಪೊಲೀಸರು ಆತನನ್ನ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.