Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ:- ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಯಾವುದೇ ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸೂಚಿಸಿದರು.

    ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹವಾಮಾನ, ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳ ಮೇವು ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳು ಮತ್ತು ಇತರೆ ಇಲಾಖೆ ವಿಷಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕುಡಿಯುವ ನೀರಿಗೆ ಅಧಿಕಾರಿಗಳು ಪ್ರಥಮ ಪ್ರಾಶಸ್ತ್ಯ ನೀಡಬೇಕು. ಜಲ ಜೀವನ್ ಮಿಷನ್ (ಜೆಜೆಎಂ) ಅಡಿ ಗ್ರಾಮಗಳಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿದ ಬಳಿಕವಷ್ಟೇ ಆಯಾಯ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಈ ಬಗ್ಗೆ ದೂರು ಕೇಳಿ ಬರುತ್ತಿದೆ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

    ಹೊಂಗನೂರು, ಇರಸವಾಡಿ, ಕೆಂಪನಪುರ ಗ್ರಾಮ ಪಂಚಾಯಿತಿಗಳಿಗೆ ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹಸ್ತಾಂತರ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನಿಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಅವರು ಪ್ರಸ್ತಾಪಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸದ ಹೊರತು ಹೇಗೆ ಗ್ರಾಮ ಪಂಚಾಯಿತಿಗಳಿಗೆ ವಹಿಸುತ್ತೀರಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಅವರನ್ನು ಸಚಿವರು ಪ್ರಶ್ನಿಸಿದರು.

    ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಹ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆಯಾಗಬಾರದು. ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಇರುವ ಕ್ರಮಗಳ ಬಗ್ಗೆ ಮುತುವರ್ಜಿ ವಹಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಸಚಿವರು ಹೇಳಿದರು.

    ಕೃಷಿ ಚಟುವಟಿಕೆಗಳಿಗೆ ಪೂರಕವಾದ ಬಿತ್ತನೆಬೀಜ, ರಸಗೊಬ್ಬರ ಇನ್ನಿತರ ಪರಿಕರಗಳಿಗೆ ಯಾವುದೇ ತೊಂದರೆ ಯಾಗಬಾರದು. ಜಾನುವಾರುಗಳು ರೋಗದಿಂದ ಮರಣ ಹೊಂದಿದಾಗ ನೀಡುವ ಪರಿಹಾರವನ್ನು ವಿಳಂಬ ಮಾಡಬಾರದು. ಮೇವು ದಾಸ್ತಾನು ಸಹ ಅಗತ್ಯಕ್ಕನುಗುಣವಾಗಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

    ಬಿ.ಎಸ್.ಎನ್.ಎಲ್. ಸಂಪರ್ಕ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಕುರಿತು ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮೇಜರ್ ಪಿ. ಮಣಿವಣ್ಣನ್ ಅವರು ಬಂಡೀಪುರದಲ್ಲಿ ಸ್ಥಾಪಿಸಲಾಗುವ ಟವರ್ ಗೆ ಅವಶ್ಯವಿರುವ ಸೋಲಾರ್ ಸಂಪರ್ಕಕಕ್ಕೆ ಫಿಲ್ಲರ್‍ಗಳನ್ನು ನಿರ್ಮಾಣ ಮಾಡಬೇಕು. ಪ್ರಸ್ತಾವನೆಯನ್ನು ಕಳುಹಿಸಿ ಈ ಸಂಬಂಧ ಪರಿಶೀಲಿಸಿ ಮುಂದಿನ ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಅರಣ್ಯ ಇಲಾಖೆಯ ವ್ಯಾಪ್ತಿಯೊಳಗೆ ಕೈಗೊಳ್ಳಬೇಕಿರುವ ಕಾಮಗಾರಿಗಳ ಅನುಷ್ಠಾನ ಸಂಬಂಧ ಪರಿಶೀಲನೆ ಮಾಡಬೇಕು. ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗೆ ತಾವು ಸಹ ಮಾತನಾಡಲಿದ್ದು ಗಮನಕ್ಕೆ ತರಲಾಗುವುದು. ಯಾವುದೇ ತೊಡಕುಗಳಿದ್ದರೂ ಪರಿಹರಿಸಿಕೊಳ್ಳಬೇಕು ಎಂದು ಮೇಜರ್ ಪಿ. ಮಣಿವಣ್ಣನ್ ಅವರು ತಿಳಿಸಿದರು.

    ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ ಶುದ್ದತೆಯ ಬಗ್ಗೆ ಖಾತರಿಪಡಿಸಿಕೊಳ್ಳಲಾಗುತ್ತಿದೆ. ಬೆಳಹಾನಿ, ವಸತಿ ಹಾನಿಯಂತಹ ಪ್ರಕರಣಗಳಿಗೆ ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುತ್ತಿದೆ. ಪರಿಹಾರ ಪೋರ್ಟಲ್‍ನ ಎಡಿಟ್ ಆಪ್ಶನ್ ತಾಂತ್ರಿಕ ತೊಡಕು ನಿವಾರಣೆ ಯಾಗಬೇಕಿದೆ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಹನೂರು ಭಾಗದಲ್ಲಿ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆಯಿದೆ. ಕೌದಳ್ಳಿ ಭಾಗದಲ್ಲಿ ಬೋರ್‍ವೆಲ್ ಕೊರೆಸಲು ಸ್ಥಳ ಗುರುತಿಸಲಾಗಿದೆ. ಆದರೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕಿದೆ ಎಂದರು.

    ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಅಧ್ಯಕ್ಷರಾದ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಎಫ್‍ಒ ಚಕ್ರಪಾಣಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025

    ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು – ಕಾರಿನ ಮುಂಭಾಗ ಸಂಪೂರ್ಣ ಜಖಂ!

    July 1, 2025

    ಹಾಸನದಲ್ಲಿ ಮಹಾಮಾರಿ ಹೃದಯಾಘಾತಕ್ಕೆ ಬಾಣಂತಿ ಬಲಿ ; ನಿಲ್ಲದ ಆತಂಕ

    July 1, 2025

    ಹಾಸನಕ್ಕೆ “ಹೃದಯಾಘಾತʼ ಪೆಡಂಭೂತ ; ಹಾರ್ಟ್ ಅಟ್ಯಾಕ್‌ನಿಂದ ಮತ್ತೋರ್ವ ಸಾವು

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.