ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸನ್ಮಾನಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಹಾರ ಹಾಕಿ, ಫಲ ತಾಂಬೂಲ ನೀಡಿ ಗೌರವಿಸಿದರು. ಮುಂದಿನ ವಿದ್ಯಾರ್ಥಿ ಜೀವನದಲ್ಲಿಯೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಸಚಿವರು ಹಾರೈಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಇತರರು ಇದ್ದರು.
ಗುಂಡ್ಲುಪೇಟೆ ತಾಲೂಕಿನ ಆದರ್ಶ ವಿದ್ಯಾಲಯದ ಹರ್ಷಿಣಿ.ಎಂ, ರಾಜೇಶ್ವರಿ, ಕೊಳ್ಳೇಗಾಲದ ಶ್ರೀ ವಾಸವಿ ವಿದ್ಯಾ ಕೇಂದ್ರ ಇಂಗ್ಲೀಷ್ ಮಾಧ್ಯಮದ ಪ್ರೌಢಶಾಲೆಯ ಶರ್ಮಿಳಾ.ಆರ್, ಬೀಬಿ ಸೂಫಿಯಾ, ಚಾಮರಾಜನಗರದ ಆದರ್ಶ ವಿದ್ಯಾಲಯದ ಪೂಜಾ.ಎನ್, ಯಶಸ್ವಿನಿ.ಜೆ, ಹನೂರಿನ ಕ್ರಿಸ್ತರಾಜ ಪ್ರೌಢಶಾಲೆಯ ಕೃತಿಕ್.ಎಲ್, ಹಿತಶ್ರೀ. ಜಿ, ಕೊಳ್ಳೇಗಾಲ ಆದರ್ಶ ವಿದ್ಯಾಲಯದ ಗಾನವಿ.ಆರ್, ಕೊಳ್ಳೇಗಾಲ ತಾಲೂಕು ಕಾಮಗೆರೆಯ ಸಂತ ಫ್ರಾನ್ಸಿಸ್ ಗ್ಸೇವಿಯರ್ ಪ್ರೌಢಶಾಲೆಯ ರಿತು ನಿಸ್ಸಿ.ಎ.ಕೆ, ಅವರು ಸನ್ಮಾನ ಸ್ವೀಕರಿಸಿದರು.