ಬೆಂಗಳೂರು:- ನೀವು ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಹರಸಾಹಸಕ್ಕೆ ಇನ್ಮುಂದೆ ಹೋಗಬೇಡಿ. ಏಕೆಂದರೆ ವನ್ಯಜೀವಿಗಳ ಫೋಟೋ ತೆಗೆಯುವುದು ಹಾಗೂ ಅವುಗಳ ಜೊತೆ ಸೆಲ್ಫಿ ತೆಗೆದುಕೊಂಡ್ರೆ ಕಾನೂನು ಕ್ರಮ ಗ್ಯಾರಂಟಿ ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ಕೊಟ್ಟಿದ್ದಾರೆ.
ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದರು.
ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ, ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.