ಬೆಂಗಳೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕೊರೊನಾದ ಕರಾಳ ಛಾಯೆ ಮತ್ತೆ ವ್ಯಾಪಿಸಲು ಆರಂಭಿಸಿದೆ. ಹೌದು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ 9 ತಿಂಗಳ ಮಗುವಿನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ ಎಂದು ತಿಳಿದು ಬಂದಿದೆ.
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಹೇಳಿದ್ದಾರೆ.