ಕಾರವಾರ:- ಇಲ್ಲಿನ ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ. ಅಬ್ಬರದ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು, ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ.
Rape Case: ಬೆಳಗಾವಿ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್!
ಅಬ್ಬರದ ಮಳೆಯಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.
ತಾತ್ಕಾಲಿಕ ರಸ್ತೆ ಕೊಚ್ಚಿಹೋಗಿದ್ದರಿಂದ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ