ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಹಾಕುತ್ತಿರುವ ಹಿನ್ನೆಲೆ, ಸ್ಥಳೀಯ ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಪ್ರತಿದಿನವೂ ಹರಸಾಹಸ ಪಡಬೇಕಾದ ಪರಿಸ್ಥಿತಿ ಉಂಟಾಗಿದೆ.
ಕಾಡಿನಿಂದ ನಾಡಿಗೆ ಬಂದಿರುವ ಆನೆಗಳ ಗುಂಪು ಮಲ್ಲಯ್ಯನಪುರದ ಹಲವು ಜಮೀನುಗಳಿಗೆ ನುಗ್ಗಿ, ನೀರಾವರಿ ಪರಿಕರಗಳನ್ನು ಹಾನಿಗೊಳಿಸಿದ್ದು, ಮುಸುಕಿನ ಜೋಳ ಮತ್ತು ಬಾಳೆ ಬೆಳೆಗಳಿಗೆ ಭಾರೀ ನಷ್ಟ ಉಂಟುಮಾಡಿದೆ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಈ ಅಹಿತಕರ ಬೆಳವಣಿಗೆಯಿಂದ ಬೇಸತ್ತ ರೈತರು ಸರ್ಕಾರದಿಂದ ತಕ್ಷಣದ ಪರಿಹಾರ ಹಾಗೂ ಕಾಡಾನೆ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಸ್ಥಳೀಯ ರೈತರು ಕುಮಾರ್, ಕನಕರಾಜು ಸೇರಿದಂತೆ ಹಲವರು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.