ಬಂಗಾರಪೇಟೆ : ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೈದ್ಯ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದು ಹೋಗುವ ಚೆನ್ನೈ ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ದುರ್ಘಟನೆ ನಡೆದಿದೆ.
ರಸ್ತೆ ಅಪಘಾತ: ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death!
ಕಾರು ಅಪಘಾತದಲ್ಲಿ ಆಂದ್ರಪ್ರದೇಶ ಮೂಲದ ವೈದ್ಯ ಕೃಷ್ಣ ಜಗನ್(೪೦) ಸ್ಥಳದಲ್ಲಿ ಮೃತಪಟ್ಟ ವೈದ್ಯನಾಗಿದ್ದಾನೆ. ಅನಂತಪುರ ದಿಂದ ಕುಪ್ಪಂ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಪಘಾತಕ್ಕೆ ಅತಿ ವೇಗವೇ ಕಾರಣವೆಂದು ಮೇಲೋಟ್ನಕ್ಕೆ ಕಂಡು ಬಂದಿದೆ.
ರಸ್ತೆ ಆರಂಭವಾಗುವ ಮುನ್ನವೇ ಬೆಂಗಳುರು-ಚೆನೈ ಕಾರಿಡಾರ್ ರಸ್ತೆಯಲ್ಲಿ ಅಪಘಾತ ಸಂಖ್ಯೆಗಳು ಹೆಚ್ಚಾಗಿ ಹಲವಾರು ಮಂದಿ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.