Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಂಚಲಗುಡ ಜೈಲಿನಿಂದ ಬೆಂಗಳೂರು ಜೈಲಿಗೆ ಗಣಿಧಣಿ ಜನಾರ್ಧನ ರೆಡ್ಡಿ ಶಿಫ್ಟ್!‌

    By Author AINMay 27, 2025
    Share
    Facebook Twitter LinkedIn Pinterest Email
    Demo

    ಅಕ್ರಮ ಗಣಿಗಾರಿಕೆ ಮತ್ತು ರಪ್ತು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 7 ವರ್ಷ ಶಿಕ್ಷೆಗೆ ಗುರಿಯಾಗಿರುವ ಜನಾರ್ಧನ ರೆಡ್ಡಿ ಅವರನ್ನು ಚಂಚಲಗುಡ ಜೈಲಿನಿಂದ ಬೆಂಗಳೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಇಂದು ಬಾಡಿ ವಾರಂಟ್‌ ಮೇಲೆ ರೆಡ್ಡಿಯನ್ನು ಹೈದರಾಬಾದ್‌ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ್ ಭಟ್ ಅವರು ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶ ಪ್ರಕಟಿಸಿ ಮುಂದಿನ ವಿಚಾರಣೆಯನ್ನು ಜೂನ್‌ 2ಕ್ಕೆ ಮುಂದೂಡಿಕೆ ಮಾಡಿದರು.

    ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯ ದೋಷಿಯೆಂದು ಘೋಷಿಸಿ, ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಮೇ 06, 2025 ರಂದು ಪ್ರಕಟಗೊಂಡಿತ್ತು. ಪ್ರಕರಣವು ಬಳ್ಳಾರಿ ಜಿಲ್ಲೆಯ ಓಬಳಾಪುರಂ ಗಣಿಗಾರಿಕೆಯಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ್ದು, ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಗಣಿಗಾರಿಕೆ ನಿಯಮಗಳ ಉಲ್ಲಂಘನೆಯ ಆರೋಪಗಳು ಹೊರಿಸಲಾಗಿತ್ತು.

    ಏನಿದು ಪ್ರಕರಣ?
    ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಿದ ನಂತರ ಪೊಲೀಸರು ರೆಡ್ಡಿಯನ್ನು ಬಂಧಿಸಿ ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಿದ್ದರು. ಈ ಮೂಲಕ 10 ವರ್ಷಗಳ ಬಳಿಕ ಮತ್ತೆ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದಾರೆ.

    ಹೈದರಾಬಾದ್‌ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿತ್ತು. ರೆಡ್ಡಿ ಜತೆಗೆ ಒಎಂಸಿ ಕಪನಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ, ರೆಡ್ಡಿ ಆಪ್ತ ಎಂ.ಅಲಿಖಾನ್‌, ಗಣಿ ಇಲಾಖೆ ಮಾಜಿ ಅಧಿಕಾರಿ ವಿ.ಡಿ.ರಾಜಗೋಪಾಲ್‌ ದೋಷಿಗಳು ಎಂದು ಹೇಳಿದೆ. ಕೋರ್ಟ್‌ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಹಾಗೂ ಒಎಂಸಿ ಗಣಿ ಕಂಪನಿಗೆ 2 ಲಕ್ಷ ರೂ. ದಂಡ ವಿಧಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025

    ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ

    May 29, 2025

    ಪ್ರೀತಿಸಿ ಮದುವೆಯಾಗಿದ್ದವಳ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್!

    May 29, 2025

    ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ!

    May 29, 2025

    ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.