Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!

    By AIN AuthorMay 28, 2025
    Share
    Facebook Twitter LinkedIn Pinterest Email
    Demo

    ಮಂಡ್ಯ :- ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಎರಡನೇ ದಿನವು ಮದ್ದೂರು ಪುರಸಭೆ ಕಛೇರಿ ಮುಂಭಾಗ ಮುಷ್ಕರ ಮುಂದುವರೆದಿದೆ.

    ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

    ಮದ್ದೂರು ಪುರಸಭೆ ಎದುರು ಪೌರ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಎರಡನೇ ದಿನದಂದು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

    ಎರಡನೇ ದಿನವು ಪುರಸಭೆಯ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದನ್ನು ನೋಡಿ ಸಾರ್ವಜನಿಕರು ವಾಪಸ್‌ ಹೋಗುತ್ತಿದ್ದರು.

    ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.

    ಪೌರ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.

    * ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರಿ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

    * ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡ್ನರ್, ಸ್ಯಾನಿಟರಿ ಸೂಪರವೈಸರ್, ಯುಜಿಡಿ ಸಹಾಯಕರು, ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು.

    * ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು.

    * ಎಲ್ಲಾ ನೌಕರರಿಗೆ ಎಸ್ ಎಫ್ ಸಿ ಮುಕ್ತ ನಿಧಿಯಿಂದ ವೇತನ ನೀಡುವುದು.

    * ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಅನಿರ್ಧಿಷ್ಟಾವಧಿ ಮುಷ್ಕರ ಮಾಡುವ ಮೂಲಕ ಕಚೇರಿಗಾಗಲೀ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್
    ಪ್ರತಿಭಟನಾ ನಿರತರೊಂದಿಗೆ ಮಾತನಾಡಿ, ಕಳೆದೆರಡು ದಿನಗಳಿಂದ ಪಟ್ಟಣದಾದ್ಯಂತ ಪೌರ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಪೌರ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು ಹಾಗೂ ಈ ಸಂಬಂಧ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ, ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.

    ವರದಿ : ಗಿರೀಶ್ ರಾಜ್ ಮಂಡ್ಯ

    Demo
    Share. Facebook Twitter LinkedIn Email WhatsApp

    Related Posts

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    May 30, 2025

    ಮೇಕೆ ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ..! ಗಂಭೀರ ಗಾಯ

    May 30, 2025

    ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು..!

    May 30, 2025

    ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಕೋಲಾರದಲ್ಲಿ ಕರವೇ ಪ್ರತಿಭಟನೆ!

    May 30, 2025

    ಕಂದಾಯ ಇಲಾಖೆ ಸಚಿವರು ನೋಡಲೇಬೇಕಾದ ಸುದ್ದಿ: AC, DC ಆದೇಶಗಳಿಗಿಲ್ಲ ಕವಡೆ ಕಾಸಿನ ಕಿಮ್ಮತ್ತು

    May 30, 2025

    ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ..!

    May 30, 2025

    ವ್ಯಾಪಕ ಮಳೆ: 100ರ ಗಡಿ ದಾಟಿದ ಕೆ.ಆರ್.ಎಸ್ ಡ್ಯಾಂ ನ ನೀರಿನ ಮಟ್ಟ.!

    May 30, 2025

    ಪೌರ ನೌಕರರ ಮುಷ್ಕರ: ಗಬ್ಬೆದ್ದು ನಾರುತ್ತಿರುವ ರಸ್ತೆಗಳು..!

    May 30, 2025

    ಗುಡ್ಡ ಕುಸಿತ ದುರಂತ: ಸಾವು ಗೆದ್ದ ತಾಯಿ: ಫಲಿಸಲೇ ಇಲ್ಲ ತಾಯಿಯ ಕರುಳಿನ ಕೂಗು – ಇಬ್ಬರು ಮಕ್ಕಳ ದುರ್ಮರಣ..!

    May 30, 2025

    ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು: ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಯು.ಟಿ ಖಾದರ್ ಸೂಚನೆ

    May 30, 2025

    ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ: ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು – ಗುಡ್ಡ ಕುಸಿದು ಮಗು ಸಾವು

    May 30, 2025

    ಭಾರೀ ಮಳೆ: ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.