Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!

    By AIN AuthorMay 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡೆಂಘಿ ಜ್ವರ ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ವೈರಲ್ ಕಾಯಿಲೆ. ಮಲೇರಿಯಾಗೆ ಕಾರಣವಾದ ಸೊಳ್ಳೆಗಿಂತ ಇದು ಭಿನ್ನವಾಗಿರುತ್ತದೆ. ಈಡಿಸ್ ಈಜಿಪ್ಟಿ ಸೊಳ್ಳೆ ಹಗಲಿನಲ್ಲಿ ಆಹಾರವನ್ನು ತಿನ್ನುತ್ತದೆ. ಹೀಗಾಗಿ ಹಗಲಿನ ಹೊತ್ತು ಅಗತ್ಯ ರಕ್ಷಣಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ. ಡೆಂಘಿ ಜ್ವರವನ್ನು ಮಕ್ಕಳು ಮತ್ತು ವಯಸ್ಕರಲ್ಲಿ ಹೆಚ್ಚಾಗಿ ಕಾಣಬಹುದು. ಒಂದು ವೇಳೆ ಮಕ್ಕಳಲ್ಲಿ ಈ ಕಾಯಿಲೆ ಕಂಡುಬಂದಲ್ಲಿ ಪೋಷಕರು ಹೆಚ್ಚು ನಿಗಾ ವಹಿಸುವ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

    ನೀವು ತಮಿಳು ಹಾಸನ್ ಅಂತ ಹೆಸರು ಬದಲಾಯಿಸಿಕೊಳ್ಳಿ: ಕನ್ನಡ ವಿವಾದಕ್ಕೆ ಹಂಸಲೇಖ ತಿರುಗೇಟು!

    ಕರ್ನಾಟಕದಲ್ಲಿ ಡೆಂಘಿ  ಭೀತಿ ಆರಂಭವಾಗಿದ್ದು, ಈಗಾಗಲೇ ಡೆಂಘಿ ಕೇಸುಗಳ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಅಲ್ಲದೆ ಮಳೆಯಿಂದಾಗಿ ಡೆಂಘಿ ಪ್ರಕರಣಗಳು ಹೆಚ್ಚಾಗಬಹುದು ಎಂಬ ಆತಂಕ ಎದುರಾಗಿದೆ. ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

    ಡೆಂಘಿ ಬಗ್ಗೆ ಇರುವ ತಪ್ಪುಕಲ್ಪನೆಗಳೇನು?:

    ತಪ್ಪುಕಲ್ಪನೆ: ಕಲುಷಿತ ನೀರಿನಿಂದ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಡೆಂಘಿ ಹರಡುತ್ತದೆ.

    ಸತ್ಯ: ಸೊಳ್ಳೆ ಕಡಿತದಿಂದ ಮಾತ್ರ ಡೆಂಘಿ ಹರಡುತ್ತದೆ.

    ತಪ್ಪುಕಲ್ಪನೆ: ಡೆಂಘಿ ಸೋಂಕಿತ ತಾಯಂದಿರು ಮಗುವಿಗೆ ಹಾಲುಣಿಸಬಾರದು.

    ಸತ್ಯ: ಡೆಂಘಿ ವೈರಸ್ ಎದೆ ಹಾಲಿನ ಮೂಲಕ ಹರಡುವುದಿಲ್ಲ.

    ತಪ್ಪುಕಲ್ಪನೆ: ಸೋಂಕಿತ ಮಗುವಿನ ಸಂಪರ್ಕದಿಂದ ಮಕ್ಕಳಿಗೆ ಡೆಂಘಿ ಬರಬಹುದು.

    ಸತ್ಯ: ಸೋಂಕಿತ ಮಗುವಿನ ಸಂಪರ್ಕದಿಂದ, ಬಟ್ಟೆ ಅಥವಾ ಪಾತ್ರೆಗಳಂತಹ ವಸ್ತುಗಳನ್ನು ಹಂಚಿಕೊಳ್ಳುವ ಮೂಲಕ ಡೆಂಘಿ ಹರಡುವುದಿಲ್ಲ.

    ತಪ್ಪುಕಲ್ಪನೆ: ಡೆಂಘಿ ಸೋಂಕಿನಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

    ಸತ್ಯ: ಡೆಂಘಿಯಿಂದ ಯಾವುದೇ ರೋಗನಿರೋಧಕ ಶಕ್ತಿ ಹೆಚ್ಚುವುದಿಲ್ಲ. ಜನರು ಡೆಂಘಿಯಿಂದ ಪುನಃ ಸೋಂಕಿಗೆ ಒಳಗಾಗಬಹುದು.

    ರೋಗಲಕ್ಷಣಗಳು:

    ಮಕ್ಕಳಲ್ಲಿ ಡೆಂಘಿ ಬಂದಿದೆ ಅಂತ ತಿಳಿಯೋದು ಹೇಗೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಒಂದು ವೇಳೆ ಮಗುವಿನಲ್ಲಿ ಈ ಕೆಳಗೆ ತಿಳಿಸಿರುವ ರೋಗಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

    ಊಟ ಸೇವನೆಗೆ ನಿರಾಕರಿಸುವುದು ಅಥವಾ ವಾಂತಿ ಮಾಡುವುದು.

    <span;>* ನಿದ್ರಾಹೀನತೆ ಅಥವಾ ಚಡಪಡಿಕೆಗೆ ಒಳಗಾಗುವುದು.

    <span;>* ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ, ವಾಂತಿ ಅಥವಾ ಮಲದಲ್ಲಿ ರಕ್ತಸ್ರಾವ ಕಂಡುಬರುವುದು.

    ಹೊಟ್ಟೆ ನೋವು

    <span;>* ಚರ್ಮದ ಬಣ್ಣ ಬದಲಾವಣೆ, ಕೈ ಮತ್ತು ಪಾದಗಳು ತಣ್ಣಗಾಗುವುದು.

    <span;>* ಕನಿಷ್ಟ 6 ಗಂಟೆಗಳ ಕಾಲ ಮೂತ್ರ ಕಟ್ಟಿಕೊಂಡಿರುವುದು.

    ಪೋಷಕರಿಗೆ ಸಲಹೆ:

    ಡೆಂಘಿ ಕಾಯಿಲೆ ಹರಡುವಿಕೆ ಬಗ್ಗೆ ಆತಂಕಕ್ಕೊಳಗಾದ ಪೋಷಕರು ತಮ್ಮ ಮಕ್ಕಳನ್ನು ರೋಗದಿಂದ ರಕ್ಷಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವುಗಳೆಂದರೆ,

    • ಸೊಳ್ಳೆಗಳನ್ನು ದೂರವಿಡಲು ಸೊಳ್ಳೆ ನಿವಾರಕಗಳು ಮತ್ತು ಸೊಳ್ಳೆ ಬತ್ತಿಗಳನ್ನು ಬಳಸುವುದು.

    • ಬೆಳಗ್ಗೆ ಮತ್ತು ಮುಸ್ಸಂಜೆ ವೇಳೆ ಸೊಳ್ಳೆಗಳು ಹೆಚ್ಚು, ಹೀಗಾಗಿ ಮಕ್ಕಳು ಮೈತಂಬಾ ಉಡುಪುಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು.

    ಮನೆಯ ಆವರಣದಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಮನೆಯ ಸುತ್ತ ನಿಂತ ನೀರನ್ನು ಸ್ವಚ್ಛಗೊಳಿಸುವುದು ಪ್ರಮುಖವಾದುದು.

    • ಎರಡು ತಿಂಗಳೊಳಗಿನ ಶಿಶುಗಳಿಗೆ ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯ.

    • ಸೊಳ್ಳೆಗಳು ಹೆಚ್ಚಿರುವ ಮುಂಜಾನೆ ಮತ್ತು ಮುಸ್ಸಂಜೆ ಸಮಯದಲ್ಲಿ ಮಕ್ಕಳು ಹೊರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಪೋಷಕರು ನೋಡಿಕೊಳ್ಳಬೇಕು.

    Demo
    Share. Facebook Twitter LinkedIn Email WhatsApp

    Related Posts

    ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್: ಏನೆಲ್ಲಾ ಚರ್ಚೆ ನಡೀತು?

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025

    ಪ್ರಶ್ನೆ ಮಾಡಿದ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಡ್ರೈವರ್ ಸಸ್ಪೆಂಡ್!

    June 1, 2025

    ಬೆಂಗಳೂರಿನಲ್ಲಿ ನೇಪಾಳಿ ದಂಪತಿಯಿಂದ ಮನೆಗಳ್ಳತನ: ಚಿನ್ನ, ನಗದು ಕದ್ದು ಎಸ್ಕೇಪ್.. ಐದರಿಂದ ಕೃತ್ಯ!

    June 1, 2025

    ಗೋಲ್ಡ್ ಪ್ರಿಯರ ಗಮನಕ್ಕೆ: ಶುದ್ಧ ಚಿನ್ನದ ಬೆಲೆ ಎಷ್ಟು ಗೊತ್ತಾ!? ಇಂದಿನ ದರಪಟ್ಟಿ ಇಲ್ಲಿದೆ!

    June 1, 2025

    ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ!

    May 31, 2025

    ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

    May 31, 2025

    ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!

    May 31, 2025

    ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ!

    May 31, 2025

    ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ!

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.