Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!

    By AIN AuthorJune 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು ಜೂ 2: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

    ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

    ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

    ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

    ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

    ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

    ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

    ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
    ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 10ರ ಬಳಿಕ ಮಳೆ ಹೆಚ್ಚಳ!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ನಾಲ್ವರು ಅರೆಸ್ಟ್.. ಉಳಿದವರು ಎಸ್ಕೇಪ್; ಪೊಲೀಸರಿಂದ ಶೋಧ!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ರಾತ್ರೋ-ರಾತ್ರಿ ಓರ್ವ ಅರೆಸ್ಟ್.. ತನಿಖೆ ಚುರುಕು!

    June 6, 2025

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ದಯಾನಂದ್ ಸಸ್ಪೆಂಡ್: ಪೊಲೀಸ್ ಇತಿಹಾಸದಲ್ಲೇ ಇದು ಕರಾಳ ದಿನ – ಭಾಸ್ಕರ್ ರಾವ್ ಆಕ್ರೋಶ!

    June 6, 2025

    ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!

    June 6, 2025

    ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?

    June 5, 2025

    Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್!

    June 5, 2025

    ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್‌.. ಘಟನೆ ಹೇಗಾಯ್ತು?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.