Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB vs PBKS: ಇಂದು ಫೈನಲ್ ಪಂದ್ಯ ರದ್ದಾದ್ರೆ ಯಾರಾಗ್ತಾರೆ ಚಾಂಪಿಯನ್? IPL ನಿಯಮಗಳೇನು..?

    By Author AINJune 3, 2025
    Share
    Facebook Twitter LinkedIn Pinterest Email
    Demo

    ಇಂದು ಐಪಿಎಲ್​ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್​​ ನ ಫೈನಲಿಸ್ಟ್​ಗಳು ಕನ್​ಫರ್ಮ್ ಆಗಿದ್ದಾರೆ.  ಈ ಬಾರಿಯ ಐಪಿಎಲ್​ ಬಿಗ್ ಫೈಟ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

    ಇಂದು ನಡೆಯಲಿರುವ ಪಂದ್ಯದ ಮತ್ತೊಂದು ವಿಶೇಷತೆ ಎಂದರೆ ಆರ್​ಸಿಬಿ 9 ವರ್ಷಗಳ ಬಳಿಕ ಫೈನಲ್​ಗೇರಿದರೆ, ಪಂಜಾಬ್ ಕಿಂಗ್ಸ್ 11 ವರ್ಷಗಳ ಬಳಿಕ ಫೈನಲ್ ಪಂದ್ಯವಾಡಲು ಸಜ್ಜಾಗುತ್ತಿದೆ.

    ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಆದರೆ, ಮಳೆಯ ಭೀತಿಯಿಂದಾಗಿ ಫೈನಲ್ ಪಂದ್ಯ ರದ್ದಾದರೆ ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನಸ್ಸಿನಲ್ಲಿ ಮೂಡಿದೆ. IPL ನಿಯಮಗಳ ಪ್ರಕಾರ ಈ ಸನ್ನಿವೇಶವನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬುದರ ಕುರಿತು ಇಲ್ಲಿ ವಿವರವಾಗಿ ತಿಳಿಸಲಾಗಿದೆ.

    ಪಂಜಾಬ್-ಮುಂಬೈ ನಡುವಿನ ಎಲಿಮಿನೇಟರ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಕೊನೆಗೂ ಮಳೆ ನಿಂತ ಮೇಲೆ ಸುಮಾರು 2:30 ಗಂಟೆಯ ನಂತರ ಪಂದ್ಯ ಆಡಿಸಲಾಗಿತ್ತು. ಮಳೆ ನಿಂತ ಬಳಿಕ ಪೂರ್ಣ 20 ಓವರ್‌ಗಳನ್ನು ಆಡಿಸಲಾಗಿತ್ತು. ಹವಾಮಾನ ವರದಿ ಪ್ರಕಾರ ಅಹಮದಾಬಾದ್‌ನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಮಳೆ ಬಂದರೂ ದೊಡ್ಡ ಮಟ್ಟದ ಸಮಸ್ಯೆ ಎದುರಾಗುವುದಿಲ್ಲ. ಯಾಕೆಂದರೆ ಪ್ರತಿ ದೊಡ್ಡ ಕ್ರಿಕೆಟ್‌ ಟೂರ್ನಿಗೆ ಇರುವಂತೆ ಫೈನಲ್ ಪಂದ್ಯಕ್ಕೆ ಮೀಸಲು ದಿನ ಇರಿಸಲಾಗಿದೆ.

    ಒಂದು ವೇಳೆ ಮಂಗಳವಾರ ಪಂದ್ಯ ಸಾಧ್ಯವಾಗದೇ ಹೋದರೆ ಮೀಸಲು ದಿನವಾದ ಬುಧವಾರ ಪಂದ್ಯ ನಡೆಯಲಿದೆ. ಒಂದು ವೇಳೆ ಎರಡೂ ದಿನ ಪಂದ್ಯ ನಡೆಯದೇ ಇದ್ದರೆ ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡ ಚಾಂಪಿಯನ್ ಆಗಲಿದೆ.

    ಲೀಗ್‌ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್‌ ತಲಾ 19 ಅಂಕ ಸಂಪಾದಿಸಿದ್ದರೂ ನೆಟ್‌ ರನ್‌ ರೇಟ್‌ನಲ್ಲಿ ಪಂಜಾಬ್‌ ಮುಂದಿದೆ. ಆರ್‌ಸಿಬಿ 0.301 ನೆಟ್‌ ರನ್‌ ರೇಟ್‌ ಹೊಂದಿದ್ದರೆ ಪಂಜಾಬ್‌ 0.372 ಹೊಂದಿದೆ. 0.071 ಅಂಕ ಹೆಚ್ಚಿರುವ ಕಾರಣ ಪಂಜಾಬ್‌ ಚಾಂಪಿಯನ್‌ ಆಗಿ ಹೊರಹೊಮ್ಮಲಿದೆ.

    ಮಳೆಯಿಂದ ಪಂದ್ಯ ರದ್ದಾದರೆ ಏನಾಗುತ್ತದೆ?

    ರಿಸರ್ವ್ ದಿನ: ಜೂನ್ 3 ರಂದು ಫೈನಲ್ ಪಂದ್ಯ ಮಳೆಯಿಂದ ರದ್ದಾದರೆ, ಜೂನ್ 4, 2025 ರಂದು ರಿಸರ್ವ್ ದಿನದಲ್ಲಿ ಪಂದ್ಯವನ್ನು ನಡೆಸಲಾಗುತ್ತದೆ.

    ಸೂಪರ್ ಓವರ್: ರಿಸರ್ವ್ ದಿನದಂದೂ ಆಟ ಸಾಧ್ಯವಾಗದಿದ್ದರೆ, ಸೂಪರ್ ಓವರ್ ಮೂಲಕ ವಿಜೇತರನ್ನು ನಿರ್ಧರಿಸಲಾಗುತ್ತದೆ.

    ಅಂತಿಮ ನಿರ್ಧಾರ: ಒಂದು ವೇಳೆ ರಿಸರ್ವ್ ದಿನದಂದೂ ಮತ್ತು ಸೂಪರ್ ಓವರ್ ಮೂಲಕವೂ ಪಂದ್ಯಾಟವಾಡಲು ಸಾಧ್ಯವಾಗದಿದ್ದರೆ, ಲೀಗ್ ಹಂತದಲ್ಲಿ ಉನ್ನತ ಸ್ಥಾನ ಪಡೆದ ತಂಡವಾದ ಪಂಜಾಬ್ ಕಿಂಗ್ಸ್ (PBKS) ಅನ್ನು IPL 2025 ರ ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025

    RCB Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: RCB ವಿರುದ್ಧ ಪ್ರಕರಣ ದಾಖಲು!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸೈಲೆಂಟಾಗಿ ಎಸ್ಕೇಪ್ ಆಗುತ್ತಿದ್ದ RCB ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಅರೆಸ್ಟ್!

    June 6, 2025

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.