Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಮುಡಿಗೆ ಐಪಿಎಲ್ ಪಟ್ಟ: ಯಶಸ್ವಿ ನಾಯಕನಾಗಿ ಹೊರಹೊಮ್ಮಿದ ರಜತ್ ಪಾಟಿದಾರ್!

    By AIN AuthorJune 4, 2025
    Share
    Facebook Twitter LinkedIn Pinterest Email
    Demo

    ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

    ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ RCB: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್!

    17 ವರ್ಷಗಳಿಂದ ಆರ್​ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ ಕಿರೀಟವಾಗಿ ಆರ್​ಸಿಬಿ ಮುಡಿಗೇರಿದೆ. ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.

    ಇನ್ನೂ ಗೆಲುವಿನ ಬೆನ್ನಲ್ಲೇ RCB ತಂಡದ ಹಾಲಿ ಕ್ಯಾಪ್ಟನ್ ರಜತ್‌ ಪಾಟಿದಾರ್‌ ಆರ್‌ಸಿಬಿಯ ಯಶಸ್ವಿ ನಾಯಕನಾಗಿ ಹೊರಹೊಮ್ಮಿದ್ದಾರೆ. ಸಾಧನೆಯ ಜೊತೆ ಅದೃಷ್ಟ ಇದ್ದರೆ ವ್ಯಕ್ತಿಯ ಹುದ್ದೆ ಹೇಗೆ ಬೇಕಾದರೂ ಬದಲಾಗಬಹುದು ಎನ್ನುವುದಕ್ಕೆ ರಜತ್‌ ಪಾಟಿದಾರ್‌ ಸಾಕ್ಷಿ.ಟೂರ್ನಿಯ ಅರ್ಧದಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಿದ್ದ ರಜತ್‌ ಪಾಟಿದಾರ್‌ ಮೊದಲ ಬಾರಿ ತಂಡವನ್ನು ಮುನ್ನಡೆಸಿ ಚಾಂಪಿಯನ್‌ ಆಗಿ ಮಾಡಿದ್ದಾರೆ.

    2021 ರಲ್ಲಿ ಆರ್‌ಸಿಬಿ ತಂಡವನ್ನು ಸೇರಿದ್ದ ರಜತ್‌ ಕೇವಲ 4 ಪಂದ್ಯದಲ್ಲಿ 71 ರನ್‌ ಹೊಡೆದಿದ್ದರು. ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಅವರನ್ನು ಕೈಬಿಟ್ಟಿತ್ತು. 2022ರ ಹರಾಜಿನಲ್ಲಿ ಯಾವುದೇ ತಂಡ ರಜತ್‌ ಅವರನ್ನು ಖರೀದಿಸದ ಕಾರಣ ಅಲ್‌ಸೋಲ್ಡ್‌ ಆಗಿದ್ದರು.

    2022ರ ಆವೃತ್ತಿಯಲ್ಲಿ ಕರ್ನಾಟಕದ ಲುವ್ನಿತ್ ಸಿಸೋಡಿಯಾ ಗಂಭೀರವಾಗಿ ಗಾಯಗೊಳ್ಳುತ್ತಾರೆ. ಇವರ ಜಾಗಕ್ಕೆ ಯಾರನ್ನು ಖರೀದಿಸಬೇಕು ಎಂದು ಯೋಚನೆಯಲ್ಲಿದ್ದಾಗ ಆರ್‌ಸಿಬಿಗೆ ಹೊಳೆದದ್ದೇ ರಜತ್‌ ಪಾಟಿದಾರ್‌ ಹೆಸರು. ಹೀಗಾಗಿ ಟೂರ್ನಿಯ ಅರ್ಧದಲ್ಲಿ ರಜತ್‌ ಮತ್ತೆ ಆರ್‌ಸಿಬಿ ತಂಡವನ್ನು ಸೇರುತ್ತಾರೆ.

    20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಆರ್‌ಸಿಬಿಗೆ ಮರಳಿ ಬಂದ ನಂತರ ರಜತ್‌ ಸ್ಫೋಟಕ ಆಟವನ್ನು ಪ್ರದರ್ಶಿಸುತ್ತಾರೆ. ಅದರಲ್ಲೂ ಎಲಿಮಿನೇಟರ್‌ ಪಂದ್ಯದಲ್ಲಿ ರಜತ್‌ ಲಕ್ನೋ ವಿರುದ್ಧ ಕೇವಲ 54 ಎಸೆತಗಳಲ್ಲಿ 112 ರನ್‌ ( 12 ಬೌಂಡರಿ,7 ಸಿಕ್ಸ್‌) ಹೊಡೆದು ದಾಖಲೆ ನಿರ್ಮಿಸಿದ್ದರು. ಈ ಪಂದ್ಯವನ್ನು ಆರ್‌ಸಿಬಿ ರೋಚಕ 14 ರನ್‌ಗಳಿಂದ ಗೆದ್ದುಕೊಳ್ಳುತ್ತದೆ. ಈ ಮೂಲಕ ಭಾರತ ತಂಡ ಸೇರದೇ ಶತಕ ಹೊಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್‌ ಪಾತ್ರವಾಗುತ್ತಾರೆ.

    2024 ರಲ್ಲಿ ಆರ್‌ಸಿಬಿ ವಿರಾಟ್‌ ಕೊಹ್ಲಿ, ರಜತ್‌ ಪಾಟಿದಾರ್‌, ಯಶ್‌ ದಯಾಳ್‌ ಅವರನ್ನು ಉಳಿಸಿಕೊಂಡಿತ್ತು. ನಾಯಕನಾಗಿದ್ದ ಡುಪ್ಲೆಸಿಸ್‌ ಅವರನ್ನು ಕೈ ಬಿಟ್ಟು ರಜತ್‌ ಪಾಟಿದರ್‌ ಅವರನ್ನು 11 ಕೋಟಿ ರೂ. ನೀಡಿ ಉಳಿಸಿಕೊಂಡಾಗ ಈ ಬಾರಿ ಆರ್‌ಸಿಬಿ ನಾಯಕನಾಗುತ್ತಾರಾ ಎಂಬ ಪ್ರಶ್ನೆ ಆಗಲೇ ಎದ್ದಿತ್ತು. ಆದರೆ ವಿರಾಟ್‌ ಕೊಹ್ಲಿ ಅವರನ್ನು ಉಳಿಸಿಕೊಂಡಿರುವಾಗ ಯಾರು ನಾಯಕನಾಗಬಹುದು ಎಂಬ ಕುತೂಹಲ ಮೂಡಿತ್ತು. ಕೊನೆಗೆ ಆರ್‌ಸಿಬಿ ತಂಡ ರಜತ್‌ಗೆ ಕ್ಯಾಪ್ಟನ್‌ ಪಟ್ಟ ನೀಡಿತ್ತು.

    ನಾಯಕ ಸ್ಥಾನಕ್ಕೆ ನ್ಯಾಯ ನೀಡಿದ ಪಾಟಿದಾರ್‌ ಈ ಬಾರಿಯ 15 ಪಂದ್ಯಗಳಿಂದ 312 ರನ್‌ ಹೊಡೆದಿದ್ದಾರೆ. 143.78 ಸ್ಟ್ರೈಕ್‌ ರೇಟ್‌ನಲ್ಲಿ2 ಬಾರಿ ಅರ್ಧಶತಕ ಹೊಡೆದಿದ್ದಾರೆ. ರಜತ್‌ ಪಾಟಿದಾರ್‌ ಒಟ್ಟು 42 ಐಪಿಎಲ್‌ ಪಂದ್ಯ ಆಡಿದ್ದು ಒಟ್ಟು 1111 ರನ್‌ ಹೊಡೆದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.