ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದು ಬೀಗಿದೆ. ತಂಡದ ಅದ್ಭುತ ಪ್ರದರ್ಶನದಿಂದ ಈ ಗೆಲುವು ಸಿಕ್ಕಿದೆ.18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ.
ವಿಕ್ಟರಿ ಪರೇಡ್ ಟೈಮ್ಲೈನ್..
1.30ಕ್ಕೆ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮನ
1.45ಕ್ಕೆ ಹೆಚ್ಎಎಲ್ ಏರ್ಪೋರ್ಟ್ನಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಆಗಮನ
4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭೇಟಿ
5 ಗಂಟೆಗೆ ವಿಧಾನಸೌಧ ಮುಂದಿನ ಗ್ರ್ಯಾಂಡ್ ಸ್ಟೆಪ್ನಲ್ಲಿ ಅದ್ದೂರಿ ಸನ್ಮಾನ
5ಗಂಟೆ ನಂತರ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣವರೆಗೆ ವಿಕ್ಟರಿ ಪರೇಡ್
6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಆರ್ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ.
ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಓಪನ್-ಟಾಪ್ ಬಸ್ ಮೂಲಕ ಆರ್ಸಿಬಿ ತಂಡದ ಪರೇಡ್ ನಡೆಯಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ನಡೆಸಲು ಸಿದ್ಧತೆ ನಡೆದಿದೆ. ಸಾರ್ವಜನಿಕ ಮೆರವಣಿಗೆ ಬಳಿಕ 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.