ಬೆಳಗಾವಿ: ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ ಕೇವಲ 6 ರನ್ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಪ್ ಗೆದ್ದ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ಗೆಲುವಿನ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಇದರ ಬೆನ್ನಲ್ಲೆ ದುರಂತ ಸಂಭವಿಸಿದೆ. ಆರ್ಸಿಬಿ ಅಭಿಮಾನಿ ಹೃದಯಾಘಾತದಿಂದ ನಿಧನರಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಕುಂಬಾರ (25) ಮೃತ ದುರ್ಧೈವಿಯಾಗಿದ್ದು, ಆರ್ಸಿಬಿ ಫೈನಲ್ ಮ್ಯಾಚ್ ಗೆದ್ದಿದ್ದಕ್ಕೆ ಗ್ರಾಮದಲ್ಲಿ ಸಂಭ್ರಮಾಚರಣೆ ನಡೆಯುತ್ತಿತ್ತು.
ಆದ್ರೆ ಇದೇ ವೆಳೆ ಮಂಜುನಾಥ ಕುಣಿದು ಕುಪ್ಪಳಿಸುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನೂ, ಮೃತ ಮಂಜುನಾಥ ಕುಂಬಾರ ಅವರ ಅಂತ್ಯಕ್ರಿಯೆ ಅವರಾದಿ ಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.