ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು,ನಾಲ್ವರು RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಅದಲ್ಲದೆ ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆದಿತ್ತು.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಈ ರೋಚಕ ಪಂದ್ಯಾಟದಲ್ಲಿ 6 ರನ್ಗಳ ಅಂತರದಲ್ಲಿ ಆರ್ಸಿಬಿ ಭರ್ಜರಿ ಗೆಲುವು ಕಂಡಿತ್ತು. ಅಲ್ಲದೇ ಇಂದು ಆರ್ಸಿಬಿ ತಂಡ ಕಪ್ ಜೊತೆ ಬೆಂಗಳೂರಿಗೆ ಕಾಲಿಟ್ಟಿದೆ. ಅಲ್ಲದೇ ಆರ್ಸಿಬಿ ಆಟಗಾರರಿಗೆ ರಾಜ್ಯ ಸರ್ಕಾರದಿಂದ ಅದ್ಧೂರಿ ಸ್ವಾಗತವನ್ನೂ ಮಾಡಲಾಗಿತ್ತು.
ಅಲ್ಲದೇ ಅಭಿಮಾನಿಗಳಂತೂ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಸೇರಿದ್ದಾರೆ. ಆದ್ರೆ ಈ ಸಂಭ್ರಮದ ನಡುವೆ ದುರಂತ ಸಂಭವಿಸಿದೆ. ಸದ್ಯ ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.