Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳು ಬಂದ್!

    By AIN AuthorJune 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬರೋಬ್ಬರಿ 18 ವರ್ಷಗಳ ಬಳಿಕ RCB ಕಪ್ ಗೆದ್ದಿದ್ದು ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನಿಲ್ಲದ ಸಂಭ್ರಮ ಮನೆ ಮಾಡಿದೆ.

    ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!

    ಚೊಚ್ಚಲ IPL ಟ್ರೋಫಿ ಗೆದ್ದಿರುವ ಆದರೆ ಸಿಬಿಗೆ ಆರ್​ಸಿಬಿ ಬೆಂಗಳೂರಿನಲ್ಲಿ ವಿಜಯಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಿತಿಮೀರಿದ ಸಂಖ್ಯೆಯಲ್ಲಿ ಅಭಿಮಾನಿಗಳು ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಜನರ ಸ್ಥಿತಿ ಗಂಭೀರವಾಗಿದೆ. ನಾಲ್ಕೈದು ಜನರ ಕಾಲುಗಳು ಕಟ್ ಆಗಿವೆ. ಅಪ್ಪ-ಅಮ್ಮನ ಜೊತೆ ಸಂಭ್ರಮಾಚರಣೆಗೆ ಬಂದಿದ್ದ ಮಗು ಕೂಡ ಸಾವನ್ನಪ್ಪಿದೆ. ಇದರ ನಡುವೆ ಮೆಟ್ರೋ ರೈಲುಗಳಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ನೇರಳೆ ಮಾರ್ಗದ 2 ಮೆಟ್ರೋ ನಿಲ್ದಾಣಗಳಾದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳನ್ನು ಬಂದ್ ಮಾಡಲಾಗಿದೆ.

    ಆರ್​ಸಿಬಿ ತಂಡದ ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತ ಉಂಟಾಗಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪರಿಸ್ಥಿತಿ ಕೈಮೀರಿದೆ. ಮೆಟ್ರೋ ರೈಲುಗಳಲ್ಲೂ ಜನಸಾಗರವೇ ಹರಿದುಬರುತ್ತಿರುವುದರಿಂದ ಯಾವುದೇ ಅಪಾಯಗಳು, ಕಾಲ್ತುಳಿತ ಸಂಭವಿಸಬಾರದು ಎಂಬ ಉದ್ದೇಶದಿಂದ 2 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ. ಕಬ್ಬನ್​ ಪಾರ್ಕ್, ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ‘ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿರುವ ನಿಲ್ದಾಣಗಳಲ್ಲಿ ಇಂದು ಸಂಜೆ 4.30ರಿಂದಲೇ ಸೇವೆ ಸ್ಥಗಿತ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ.

    ಇನ್ನೂ ಆರ್​ಸಿಬಿ ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂಟಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 10 ಅಭಿಮಾನಿಗಳು ಮೃತಪಟ್ಟಿದ್ದಾರೆ.

    ಇನ್ನೂ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದಿರುವ ಆರ್​ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.