ಬೆಂಗಳೂರು :- ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ IPL ಟ್ರೋಫಿ ಗೆದ್ದು ಕೊಂಡಿದೆ. ಈ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡ ಸಂಭ್ರಮಾಚರಣೆಯ ವಿಜಯೋತ್ಸವ ಹಮ್ಮಿಕೊಂಡಿತ್ತು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಬಂದ್!
ಆರ್ ಸಿಬಿ ಸಂಭ್ರಮಾಚರಣೆ ಕಣ್ತುಂಬಿಕೊಳ್ಳುವ ಸಲುವಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಜನಸಾಗರವೇ ಹರಿದುಬಂದಿತ್ತು. ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.
ಮೃತರ ಸಂಖ್ಯೆ 11ಕ್ಕೆ ಏರಿಕೆ?
ಇಂದು ಮದ್ಯಾಹ್ನ ಕುಟುಂಬದ ಜೊತೆ ಸ್ಟೇಡಿಯಂ ಬಳಿ ಬಂದಿದ್ದ 14 ವರ್ಷದ ದಿವ್ಯಾಂಶ್ರೀ ಮೃತ ಯುವತಿ. 21 ವರ್ಷದ ವಿದ್ಯಾ, ಶರತ್, 21 ವರ್ಷದ ಮತ್ತಿಬ್ಬರು ಸೇರಿ ಮೃತರ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಘಟನೆಯಲ್ಲಿ ಅಸ್ವಸ್ಥಗೊಂಡವರನ್ನು ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಮೃತರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇನ್ನೂ ಮತ್ತೊಂದೆಡೆ ಸ್ಟೇಜ್ ಮೇಲೆ ಮಿನಿಸ್ಟರ್ ಗಳು ಸೆಲ್ಫಿಗೆ ಮುಗಿಬಿದ್ದಿದ್ದು, ಅಷ್ಟೂ ಸಾವುಗಳಿಗೆ ಸರ್ಕಾರದ ಅಧ್ವಾನವೇ ಕಾರಣ
ಛೆಛೇ ಇಂಥ ಸಂಭ್ರಮಾಚರಣೆ ಯಾರಿಗೆ ಬೇಕಿತ್ತು? ಎಂಬ ಆಕ್ರೋಶ ಎಲ್ಲೆಡೆ ವ್ಯಕ್ತವಾಗಿದೆ.