ಕೋಲಾರ:- ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ಮೆಡಿಕವರ್ ಆಸ್ಪತ್ರೆಯ ಸಹಬಾಗಿತ್ವದಲ್ಲಿ ಮುಳಬಾಗಿಲು ಪಟ್ಟಣದ ದೀಪಾ ಆಸ್ಪತ್ರೆಯಲ್ಲಿ ಗ್ರಾಮಾಂತರ ಜನರಿಗಾಗಿ ಎಲ್ಲಾ ರೀತಿಯ ಖಾಯಿಲೆಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯ್ತು.
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ!
ಮುಳಬಾಗಿಲು ಪಟ್ಟಣ್ಣದಲ್ಲಿ ಇದೇ ಮೊದಲನೇ ಬಾರಿಗೆ ನಡೆಸಿದ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತವಾಗಿ ತಪಾಸಣೆ ಮಾಡಿಸಿಕೊಂಡರು.ಹೆಚ್ಚಿನ ಚಿಕಿತ್ಸೆಗೆ ಅಗತ್ಯವಿರುವ ಕೆಲವರಿಗೆ ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದು ವಿಶೇಷವಾಗಿತ್ತು.ಇದೇ ವೇಳೆ ಶಿಬಿರ ದಲ್ಲಿ ಭಾಗವಹಿಸಿದ್ದ ಮೆಡಿಕವರ್ ಆಸ್ಪತ್ರೆಯ ಜೀಣಾ೯ಂಗ ಮತ್ತು ಯಕೃತ್ ರೋಗ ತಜ್ಞ ವಿಭಾಗದ ವೈದ್ಯ ಡಾ.ರೋಹಿತ್ ಮೈದೂರ್ ಮಾತನಾಡಿ,ಗ್ರಾಮೀಣ ಭಾಗದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಶಿಬರದಾಗಿದ್ದು,ಉಚಿತವಾಗಿ ಆರೋಗ್ಯ ಶಿಬಿರ ನಡೆಸುತ್ತಿದ್ದೇವೆ.
ಮೆಡಿಕವರ್ ಆಸ್ಪತ್ರೆಯಲ್ಲಿ ಆಧುನಿಕ ಗುಣಮಟ್ಟದ ಚಿಕಿತ್ಸಾ ಸೌಲಭ್ಯವಿದ್ದು ಜನರು ಇದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಹಾಗೂ ಜೀವನ ಶೈಲಿಯನ್ನು ಕಾಪಾಡಿಕೊಳ್ಳಬೇಕು ಅಂತ ಮನವಿ ಮಾಡಿದರು.ಇನ್ನು ಶಿಬಿರದಲ್ಲಿ ದೀಪಾ ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಕಿರಣ್,ಡಾ. ದೀಪ,ಮೆಡಿಕವರ್ ಆಸ್ಪತ್ರೆಯ ಡಾ.ಅಂತೋಣಿ ಸೇರಿದಂತೆ ವಿವಿಧ ವೈದ್ಯರ ತಂಡದಿಂದ ತಪಾಸಣೆ ನಡೆಸಲಾಯ್ತು,ಮೆಡಿಕವರ್ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಸತ್ಯ ನಾರಾಯಣ್,ರಾಘವೇಂದ್ರ ಸಹ ಭಾಗಿಯಾಗಿದ್ದರು.