Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    By Author AINJune 6, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್ ಅವರು. ಆರ್ಸಿಬಿ ಅಭಿಮಾನಿಗಳ ಸಾವಿನ ಸುದ್ದಿ ತಿಳಿದ ಮೇಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಫ್ ಗೆ ಮುತ್ತು ಕೊಟ್ಟು ಸಾವಿನಲ್ಲೂ ಸಂಭ್ರಮ ಮಾಡ್ತಾರೆ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ; ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರನ್ನು ಅಮಾನತು ಮಾಡಿದ್ದಾರೆ. ಖುದ್ದು ಪೊಲೀಸರೇ ಎರಡೆರಡು ಕಡೆ ಕಾರ್ಯಕ್ರಮ ಬೇಡ ಅಂದರು ಸಿಎಂ ಮತ್ತು ಡಿಸಿಎಂ ಕ್ರೆಡಿಟ್ ಪಡೆಯೋಕೆ ಈ ಕಾರ್ಯಕ್ರಮ ಮಾಡಿ ಅನಾಹುತಕ್ಕೆ ಕಾರಣರಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

    ಸಾವಿನ ವಿಷಯ ನನಗೆ ಗೊತ್ತಿರಲಿಲ್ಲ, ಅಲ್ಲಿ ನೆಟ್ವರ್ಕ್ ಇರ್ಲಿಲ್ಲ , ನಾನು ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡೆ ಅಂತ ಹೇಳಿದ್ರು, ಅಲ್ಲಿ ಜಾಮಾರ್ ಹಾಕಿದ್ರೆ ವಿಷಯವನ್ನ ನೀವು ಹೇಗೆ ತಿಳಿದುಕೊಂಡರಿ ಇದಕ್ಕೆ ಡಿಸಿಎಂ ಅವರೇ ಉತ್ತರಿಸಬೇಕು ಎಂದು ಅವರು ಪ್ರಶ್ನಿಸಿದರು.

    ಇವರುಗಳು ಕ್ರೆಡಿಟ್ ಪಡೆದುಕೊಳ್ಳಲು ಹೋಗಿ ಅಮಾಯಕರ ಜೀವಗಳನ್ನ ಬಲಿ ಪಡೆದಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿ ಜನರಿಗೆ ಅಭಿಮಾನಿಗಳಿಗೆ ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಬೇಕೆಂದು ಹೇಳಿದ್ರು. ಈಗ ಪೊಲೀಸರನ್ನ ಅಮಾನತು ಮಾಡಿರುವುದು ಕೋತಿ ತಾನು ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಪೊಲೀಸರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ

    ಐಎಎಸ್,ಐಪಿಎಸ್ ಅಧಿಕಾರಿಗಳನ್ನ ಮುಂದೆ ಇಡ್ಕೊಂಡು ನಿಮಗೆ ಬೇಕಾದ ತೀರ್ಮಾನ ತೆಗೆದುಕೊಂಡು. ಕೊನೆಗೆ ಪೊಲೀಸರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ
    ಸರ್ಕಾರ ಏನೇ ತಪ್ಪುಮಾಡಿದ್ರು ನಿಮ್ಮ ಮೇಲೆಯೇ ಗೂಬೆ ಕೂರಿಸುತ್ತದೆ. ಈ ಹಿನ್ನೆಲೆಯಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ಕೈಮುಗಿದು ಮನವಿ ಮಾಡುತ್ತೇನೆ. ಇನ್ನಾದರು ಎಚ್ಚೆತ್ತುಕೊಳ್ಳಿ ಎಂದು ಹೇಳಿದರು.

    ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳಿಗೆ ತಲೆದಂಡ

    18 ವರ್ಷದಿಂದ ಐಪಿಎಲ್ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಟ್ಟಿದೆ, ಬಹಳ ಚೆನ್ನಾಗಿ ನಡೆಸಿಕೊಂಡು ಬಂದ್ದಿದ್ದಾರೆ. ಆದರೆ ಇಲ್ಲಿ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳನ್ನು ಸಂಧಿಗ್ದ ಪರಿಸ್ಥಿತಿಗೆ ದುಡಿದವರು ಯಾರು.? ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳೇ ಉತ್ತರ ನೀಡಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    -ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತಿದೆ.!

    ಗೃಹ ಸಚಿವ ಪರಮೇಶ್ವರ್ ಗೆ ಬೇರೆ ಇಲಾಖೆ ಕೊಡೋದು ಒಳ್ಳೇದು. ಈ ಅವಾಂತರಕ್ಕೆ ಕಾರಣವಾದ ರೀಲ್ಸ್ ಮಿನಿಸ್ಟರ್ ಡಿಕೆ ಶಿವಕುಮಾರ್ ನ ಮೊದಲು ಸಸ್ಪೆಂಡ್ ಮಾಡ್ಬೇಕು. ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ “ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ” ಗಾದೆ ಇದೆ ಇದರಲ್ಲಿ ಕೋತಿ ಯಾರು.? ಮೇಕೆ ಯಾರು ಅಂತ ರಾಜ್ಯದ ಜನ ತೀರ್ಮಾನ ಮಾಡಬೇಕಿದೆ ಎಂದು ವ್ಯಂಗ್ಯ ವಾಡಿದರು.

    ಈ ಸಾವಿನ ಘಟನೆ ಮಧ್ಯಾಹ್ನವೇ ನಡೆದಿದ್ದರೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನನಗೆ ಮಾಹಿತಿಯೇ ಇಲ್ಲ ಅಂದ್ರು, ಆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಕಪ್ಪುಗೆ ಮುತ್ತು ಕೊಟ್ಟರು, ಇದು ಸರ್ಕಾರದ ವೈಫಲ್ಯ ಮೊದಲು ಪರಮೇಶ್ವರ್, ಡಿಸಿಎಂ ಅವರ ರಾಜೀನಾಮೆಯನ್ನು ಸಿಎಂ ಅವರು ಪಡೆಯಬೇಕು. ಇದು ಸರ್ಕಾರದ ವೈಫಲ್ಯ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.